ಕನ್ನಡಪ್ರಭ ವಾರ್ತೆ ಶಹಾಪುರ
ನಗರದ ನಗರಸಭೆ ಆವರಣದಲ್ಲಿ ನಡೆದ ಹೊಲಿಗೆ ಯಂತ್ರ ಹಾಗೂ ಬ್ಯೂಟಿಷಿಯನ್ ತರಬೇತಿ ಪ್ರಮಾಣ ಪತ್ರ ಮತ್ತು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಅಲೆಮಾರಿ, ಅರೆ ಅಲೆಮಾರಿ ಸಮುದಾಯ ಅವರಿಗೆ ನಿವೇಶನ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ನಗರಸಭೆ ವತಿಯಿಂದ ವಸತಿ ಹಾಗೂ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಅರ್ಜಿ ಕರೆಯಲಾಗಿತ್ತು, ಈ ವೇಳೆ ನಗರದ ಸುಮಾರು 3500 ಅರ್ಜಿಗಳು ಸ್ವೀಕೃತಿಯಾಗಿದ್ದವು. ಆಶ್ರಯ ಸಮಿತಿ ಹಾಗೂ ನಗರಸಭೆ ವತಿಯಿಂದ ಮನೆ ಮನೆ ಸರ್ವೇ ಮಾಡಿ ನಿಜವಾದ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿತ್ತು. ಇದಕ್ಕೆ ವಿಪಕ್ಷಗಳು ಆಕ್ಷೇಪಿಸಿ ನಗರಸಭೆ ಮುಂದೆ ಧರಣಿ ಮಾಡಿದ ನಂತರ ಕೋರ್ಟಿನಲ್ಲಿ ಸ್ಟೇ ತರಲಾಗಿತ್ತು. ಈಗ ಎಲ್ಲವೂ ಬಗೆಹರಿದಿವೆ. ಆದಷ್ಟು ಬೇಗ ನಿವೇಶನಗಳನ್ನು ಪಾರದರ್ಶಕವಾಗಿ ಲಾಟರಿ ಮೂಲಕ ಹಂಚಲಾಗುವುದು ಎಂದರು.ಎಲ್ಲಾ ಲೇಔಟನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಈಗಾಗಲೇ ಕುಡಿಯುವ ನೀರು, ಚರಂಡಿ, ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗಿದೆ. ನಿವೇಶನ ಹಂಚಿಕೆ ಆದ ನಂತರ ಮನೆ ಕಟ್ಟಿಕೊಳ್ಳಲು ಎಸ್ಸಿ, ಎಸ್ಟಿಗಳಿಗೆ 3.30 ಲಕ್ಷ ರು. ಗಳು ಹಾಗೂ ಇತರರಿಗೆ 2.70 ಲಕ್ಷ ರು.ಗಳು ಸಹಾಯಧನವನ್ನು ರಾಜ್ಯ ಸರಕಾರ ನೀಡಲಿದೆ. ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ಶಾಶ್ವತವಾಗಿ ಯಾರು ವಾಸವಾಗಿರುವ ವಸತಿ ಹಾಗೂ ನಿವೇಶನ ರಹಿತ ಪ್ರತಿಯೊಬ್ಬರಿಗೆ ಸೂರು ಕಲ್ಪಿಸಿ ಕೊಡಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಪೌರಾಯುಕ್ತ ರಮೇಶ್ ಬಡಿಗೇರ್ ಮಾತನಾಡಿ, 2021-22 ನೇ ಸಾಲಿನ ಅನುದಾನದಲ್ಲಿ 13 ಜನರಿಗೆ ಲ್ಯಾಪ್ಟಾಪ್, 46 ಜನ ಮಹಿಳೆಯರಿಗೆ ಬ್ಯೂಟಿಷಿಯನ್ ತರಬೇತಿ, 62 ಮಹಿಳೆಯರಿಗೆ ಹೊಲಿಗೆ ತರಬೇತಿ ಹಾಗೂ 45 ಅಲೆಮಾರಿ ಅರೆ ಅಲೆಮಾರಿ ಸಮುದಾಯ ಮಹಿಳೆಯರಿಗೆ ನಿವೇಶನ ಹಕ್ಕು ಪತ್ರ ಸಚಿವರು ವಿತರಿಸಲಿದ್ದಾರೆ ಎಂದರು.