ಜಾನಪದ ಕಲೆಗಳ ಉಳಿವಿಗೆ ಯೋಜನೆ ಅಗತ್ಯ: ಶಾಸಕ ಧೀರಜ್‌

KannadaprabhaNewsNetwork |  
Published : Jul 15, 2025, 11:45 PM IST
ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ವತಿಯಿಂದ ನಡೆದ ಗಾಳಿಪಟ ಉತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಶಾಸಕ ಧೀರಜ್ ಮುನಿರಾಜು ಸನ್ಮಾನಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಸಮಾರೋಪ ಸಮಾರಂಭ ನಡೆಯಿತು.

ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಸಮಾರೋಪ ಸಮಾರಂಭ ನಡೆಯಿತು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಗಾಳಿಪಟ ಕಲೆಯಲ್ಲಿ ದೊಡ್ಡಬಳ್ಳಾಪುರ ಖ್ಯಾತಿ ಹೊಂದಿದ್ದು ರಾಜ್ಯ ಮಟ್ಟದ ಹಲವು ಕಲಾವಿದರನ್ನು ಹೊಂದಿದೆ. ಗಾಳಿಪಟ ಹಾರಿಸುವ ಜಾನಪದ ಕಲೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಇಂದಿನ ಪೀಳಿಗೆ ಆಸಕ್ತಿ ವಹಿಸಬೇಕಿದೆ. ಗಾಳಿಪಟ ಕಲೆಗೆ ಉತ್ತೇಜನ ನೀಡಲು, ಜಾನಪದ ಪರಿಷತ್ತು ಯೋಜನೆ ರೂಪಿಸಬೇಕಿದೆ. ಅಂತೆಯೇ ಜಾನಪದ ಪರಿಷತ್ತಿನ ಮೂಲಕ ಜಾನಪದ ಕಡೆಗಳನ್ನು ಉತ್ತೇಜಿಸಲು ಹೆಚ್ಚಿನ ಕಾಲ ಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ ಎಂದರು.

ಚಿಂತಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಮಾತನಾಡಿ, ಜಾಗತೀಕರಣದ ಇಂದಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು, ಪರಂಪರೆಗಳು ಮರೆಯಾಗುತ್ತಿವೆ. ನಮ್ಮ ಜಾನಪದ ಸಂಸ್ಕೃತಿಯಲ್ಲಿ ಜನರ ಬಾವೈಕ್ಯತೆಗೆ ಪೂರಕವಾದ, ಗ್ರಾಮೀಣ ಕ್ರೀಡೆಗಳು, ಉತ್ಸವಗಳು ಹಿಂದಿನಿಂದಲೂ ಆಚರಣೆ ಮಾಡುತ್ತಿದ್ದು ಜನರ ಸಾಮೂಹಿಕ ಭಾಗವಹಿಸುವಿಕೆಗೆ ಇಂಬು ನೀಡುತ್ತವೆ. ಆದರೆ, ಇತ್ತೀಚೆಗೆ ಕಬ್ಬಡಿ, ಖೋಖೋ ಮೊದಲಾದ ಗ್ರಾಮೀಣ ಕ್ರೀಡೆಗಳು ಕಾರ್ಪೊರೇಟ್ ವ್ಯವಸ್ಥೆಗೆ ಸಿಕ್ಕಿ ಹಣ ಮಾಡಲು ಬಳಸಿಕೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸಬೇಕಾದರೆ ಜನರ ಭಾಗವಹಿಸುವಿಕೆ ಮುಖ್ಯವಾಗಿದೆ. ಗಾಳಿಪಟದಂತಹ ಕಲೆಗಳು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕಿದೆ ಎಂದು ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ಜಾನಪದ ತಜ್ಞ, ಎಚ್.ಎಲ್ ನಾಗೇಗೌಡರ ಪರಿಶ್ರಮದಿಂದಾಗಿ ರೂಪುಗೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಹಲವು ರಚನಾತ್ಮಕ ಕಾಠ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ನಮ್ಮ ಪಾರಂಪರಿಕ ಕಲೆಯಾದ ಗಾಳಿಪಟದ ಬಗ್ಗೆ ಪ್ರಚುರಪಡಿಸಲು, ಗಾಳಿಪಟ ಉತ್ಸವ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರದಲ್ಲಿ ಏರ್ಪಡಿಸಲಾಗಿದೆ. ಉತ್ಸವ ಪರಿಪತ್ತಿನ ಕಾಠ್ಯಕ್ರಮಗಳಿಗೆ ಎಲ್ಲರ ಸಹಕಾರ ದೊರೆತರೆ ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗಲಿದೆ. ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಅಧ್ಯಕ್ಷ ಎಲ್.ಎನ್.ಶ್ರೀನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಾದ ವೆಂಕಟರಾಜು(ನಾದಸ್ವರ ವಾದಕರು), ಕೆ.ಪಿ.ಪ್ರಕಾಶ್ (ನಾಟಕ ಆಕಾಡೆಮಿ ಪ್ರಶಸ್ತಿ ಪುರಸ್ಕೃತರು), ಎನ್.ಎಂ.ನಟರಾಜ್ (ಪತ್ರಿಕೋದ್ಯಮ), ಗಂಗಾಧರ (ಯಕ್ಷಗಾನ ಭಾಗವತರು), ಪೈಲ್ವಾನ್ ಒಳಪ್ಪ (ಕ್ರೀಡೆ) ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಜಾನಪದ ಮಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಅದಿತ್ಯ ನಂಜರಾಜ್, ನಗರಸಭೆ ಸದಸ್ಯ ಆರ್. ಲಕ್ಷ್ಮೀಪತಿ, ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ಕಾರ್ಯದರ್ಶಿ ಪ್ರಕಾಶ್, ಖಜಾಂಚಿ ವಿಶ್ವನಾಥ್, ಸಹಕಾರ್ಯದರ್ಶಿ ಜೆ.ವಿ.ಸುಬ್ರಹ್ಮಣ್ಯ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.

ಫೋಟೋ-14ಕೆಡಿಬಿಪಿ2-

ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ವತಿಯಿಂದ ನಡೆದ ಗಾಳಿಪಟ ಉತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಶಾಸಕ ಧೀರಜ್ ಮುನಿರಾಜು ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ