ಕನ್ನಡಪ್ರಭ ವಾರ್ತೆ ಕೆಜಿಎಫ್ಬೆಂಗಳೂರಿಗಿಂತಲೂ ಉತ್ತಮವಾಗಿ ತಾಲೂಕಿನಲ್ಲಿ ಗುಣಮಟ್ಟದ ರಸ್ತೆಗಳು, ಸುಂದರವಾದ ಉದ್ಯಾನ, ಬೀದಿದೀಪ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಸಕಲ ರೀತಿಯ ಸೌಕರ್ಯಗಳನ್ನು ಒದಗಿಸಲು ಯೋಜನೆ ಹಾಕಿಕೊಂಡಿರುವುದಾಗಿ ಶಾಸಕಿ ರೂಪಕಲಾ ಶಶಿಧರ್ ಹೇಳಿದರು. ನಗರಸಭೆ ಸಂಭಾಗಂಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೫೧೬ನೇ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು, ಪ್ರತಿ ಸಮುದಾಯಕ್ಕೊಂದು ಬೀದಿ
ಕೆಂಪೇಗೌಡರ ಸ್ತಬ್ಧ ಚಿತ್ರಗಳು ನಗರಸಭೆ ಕಚೇರಿಯಿಂದ ಹೊರಟು, ಸೂರಜ್ಮಲ್ ವೃತ್ತ, ಗಾಂಧಿ ವೃತ್ತದಲ್ಲಿ ಕೆಂಪೇಗೌಡರ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ನಗರಸಭೆ ಮೈದಾನಕ್ಕೆ ಹಿಂತಿರುಗಿದವು. ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೫ ರೈತರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗವೇಣಿ, ತಾಪಂ ಇಒ ವೆಂಕಟೇಶಪ್ಪ, ಪೌರಾಯುಕ್ತ ಮಂಜುನಾಥ್, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಧರ್ಮೇಂದ್ರ, ಬಿಇಒ ಅನಿತಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಸಿಪಿಐ ನವೀನ್, ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಲ್ಲಳ್ ಮುನಿಸ್ವಾಮಿ, ಸದಸ್ಯರು ಇದ್ದರು.