ಧಾರವಾಡ:
ಇಲ್ಲಿಯ ಕೆಲಗೇರಿ ಜೆಎಸ್ಸೆಸ್ ವಿದ್ಯಾಪೀಠದ ಆವರಣದಲ್ಲಿ ಶುಕ್ರವಾರ 500 ಉಪಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಪ್ರತಿಯೋರ್ವ ವ್ಯಕ್ತಿಯೂ ಪ್ರತಿ ವರ್ಷ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಿಸಲು ಪಣ ತೊಡಬೇಕು. ಈ ಹವ್ಯಾಸವನ್ನು ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಸುವಲ್ಲಿ ಪಾಲಕರು ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ನಿರ್ದೇಶನದಂತೆ ದೇಶಾದ್ಯಂತ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಭರದಿಂದ ಸಾಗಿದ್ದು ಸ್ವಚ್ಛತೆಯೆ ಜತೆಗೆ ಗಿಡ ನೆಟ್ಟು ಬೆಳೆಸುವ ಯೋಜನೆಯೂ ಇದರಲ್ಲಿ ಒಂದಾಗಿದೆ ಎಂದು ಹೇಳಿದರು.ಜೆಎಸ್ಸೆಸ್ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಜಿ. ಬಿರಾದಾರ ಮಾತನಾಡಿ, ಸಸ್ಯ ಪ್ರೀತಿ ಮತ್ತದರ ಒಡನಾಟವನ್ನು ಮಕ್ಕಳಿಗೆ ಪಠ್ಯದ ಒಂದು ಭಾಗವಾಗಿ ಕಲಿಸಬೇಕು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಬೃಹತ್ ಪ್ರಮಾಣದಲ್ಲಿ ಸಸಿ ನೆಡುವ ಕಾರ್ಯಕ್ಕೆ ಕೈ ಹಾಕುವ ಮೂಲಕ ಪರಿಸರ ರಕ್ಷಣೆಗೆ ಮೇಲ್ಪಂಕ್ತಿ ಹಾಕಿದೆ ಎಂದರು.
ಪರಿಸರವಾದಿ ಶಂಕರ ಕುಂಬಿ, ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜಿನಲ್ಲಿ ನೆಡುತೋಪು ವ್ಯವಸ್ಥೆಯನ್ನು ಜಿಲಾ ಆಡಳಿತಗಳು ಕಡ್ಡಾಯಗೊಳಿಸಬೇಕು ಎಂದರು.
ಈ ವೇಳೆ ಬ್ಯಾಂಕಿನ ಮಹಾಪ್ರಬಂಧಕರಾದ ಆರ್.ಟಿ. ಕಾಂಬಳೆ, ಪುನೀತ್ ಎಂ, ಸತೀಶ್ ಆರ್, ದಿಲೀಪ್ ಕುಮಾರ ಇದ್ದರು. ಬ್ಯಾಂಕಿನ ಮುಖ್ಯ ಪ್ರಬಂಧಕ ಉಲ್ಲಾಸ ಗುನಗಾ ಸ್ವಾಗತಿಸಿದರು.