ಕನ್ನಡಪ್ರಭ ವಾರ್ತೆ ನಾಪೋಕ್ಲು
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ವಿವಿಧ ಶಾಲೆಗಳಲ್ಲಿ ಭೂಮಿಯ ಮರುಸ್ಥಾಪನೆ ಮತ್ತು ಹಸಿರು ಬರ ಪರಿಸ್ಥಿತಿ ನಿರ್ವಹಣೆ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಮೀಪದ ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ಸೋಮವಾರ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಪರಿಸರ ಸಂರಕ್ಷಣೆ ಅರಿವು ಮೂಡಿಸುವ ಉದ್ದೇಶದಿಂದ ಮಡಿಕೇರಿ ತಾಲೂಕಿನ ಆಯ್ದ 15 ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಅಂಗವಾಗಿ ಜೂ. 5ರ ಪರಿಸರ ದಿನಾಚರಣೆಯಂದು ನಾಪೋಕ್ಲು ಹೋಬಳಿಯ ನಾಲ್ಕು ಶಾಲೆಗಳಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬಲ್ಲಮಾವಟಿ ಮತ್ತು ಭಾಗಮಂಡಲ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಸಂರಕ್ಷಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಗಿಡಗಳನ್ನು ಪೋಷಣೆ ಮಾಡಿ ಸಂರಕ್ಷಿಸಿ ಅದರ ನೆರಳು ಅಥವಾ ಫಲವನ್ನು ಪಡೆದುಕೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಗಿಡಗಳನ್ನು ನೀಡಿದ್ದು ಅದರ ಸಂಪೂರ್ಣ ಪೋಷಣೆಯ ಜವಾಬ್ಧಾರಿಯನ್ನು ಮಕ್ಕಳು ಮಾಡಲಿದ್ದಾರೆ ಎಂದರು.ಪರಿಸರ ಸಂರಕ್ಷಣೆ ಸಂಬಂಧ ಪಟ್ಟಂತೆ ಮುಂದಿನ ದಿನಗಳಲ್ಲಿ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ ಕೂಡ ನಡೆಯಲಿದೆ. ಸಸಿ ನೆಡುವ ಮತ್ತು ಅದನ್ನು ಸಂರಕ್ಷಣೆ ಮಾಡುವ ಪ್ರಾಮುಖ್ಯತೆಯ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜಾಥಾ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡುವ ಯೋಜನೆಯನ್ನು ಕೂಡ ಹಮ್ಮಿಕೊಂಡಿದ್ದೇವೆ ಎಂದರು.
ಕಾರ್ಯಕ್ರಮದ ಅಂಗವಾಗಿ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆ, ಅಯ್ಯಂಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಭಾಗಮಂಡಲದ