ನಾಮಧಾರಿ ಸಮುದಾಯ ಭವನ ಪೂರ್ಣಗೊಳಿಸಲು ಸಹಕಾರ ನೀಡಿ: ಕೆ.ಜಿ. ನಾಯ್ಕ ಹಣಜೀಬೈಲ್

KannadaprabhaNewsNetwork |  
Published : Jul 21, 2026, 02:30 AM IST
ಸಿದ್ದಾಪುರದಲ್ಲಿ ತಾಲೂಕು ನಾಮಧಾರಿ ಅಭಿವೃದ್ಧಿ ಸಂಘದ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಅನುದಾನ ಕೊರತೆಯಿಂದ ಇಲ್ಲಿಯ ನಾಮಧಾರಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಪೂರ್ಣಗೊಳಿಸಲು ಸಮಾಜ ಬಾಂಧವರು ದೇಣಿಗೆ ನೀಡಬೇಕು.

ನಾಮಧಾರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮನವಿ

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಅನುದಾನ ಕೊರತೆಯಿಂದ ಇಲ್ಲಿಯ ನಾಮಧಾರಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಪೂರ್ಣಗೊಳಿಸಲು ಸಮಾಜ ಬಾಂಧವರು ದೇಣಿಗೆ ನೀಡಬೇಕು ಎಂದು ನಾಮಧಾರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಜಿ. ನಾಯ್ಕ ಹಣಜೀಬೈಲ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ೨೦೦೩ರಲ್ಲಿ ನಾಮಧಾರಿ ಕ್ಷೇಮಾಭಿವೃದ್ಧಿ ಸಂಘ ಸ್ಥಾಪಿಸಲಾಗಿದೆ ಎಂದು ಹೇಳಿದರು.

೨೦೦೬ರಲ್ಲಿ ಮಾಜಿ ಸಿಂ ಎಸ್. ಬಂಗಾರಪ್ಪ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದರು. ಹಿಂದಿನ ಸಂಸದ ಅನಂತಕುಮಾರ ಹೆಗಡೆ ₹೧೦ ಲಕ್ಷ ಅನುದಾನ ನೀಡಿದ್ದರು. ಅಲ್ಲದೆ ಮಾಜಿ ಸಚಿವ ಶಿವಾನಂದ ನಾಯ್ಕ, ವಿಶ್ವೇಶ್ವರ ಹೆಗಡೆ ಕಾಗೇರಿ, ವಿವೇಕಾನಂದ ವೈದ್ಯ ಮತ್ತು ನಮ್ಮ ಸಮುದಾಯದ ರಾಜ್ಯಸಭಾ ಸದಸ್ಯರಾಗಿದ್ದ ಬಿ.ಕೆ. ಹರಿಪ್ರಸಾದ ಮುಂತಾದವರು ಸಾಕಷ್ಟು ಅನುದಾನ ನೀಡಿದ್ದರು. ಈ ವರೆಗೆ ₹೪.೩೮ ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡ ಪೂರ್ಣಗೊಳಿಸಲು ಇನ್ನೂ ₹೨ ಕೋಟಿಗೂ ಹೆಚ್ಚಿನ ಹಣ ಬೇಕು ಎಂದು ಅಂದಾಜು ಮಾಡಲಾಗಿದೆ. ಈ ಕುರಿತು ಶಾಸಕ ಭೀಮಣ್ಣ ನಾಯ್ಕ ಅವರನ್ನು ಭೇಟಿ ಚರ್ಚಿಸಿದಾಗ ₹೫೦ ಲಕ್ಷ ಮಂಜೂರು ಮಾಡಿದ್ದು, ಇನ್ನುಳಿದ ಒಂದು ಕೋಟಿ ರು. ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೂ ಸುಮಾರು ಒಂದು ಕೋಟಿ ರು. ಕೊರತೆ ಬೀಳಲಿದೆ ಎಂದರು.

ಉಪಾಧ್ಯಕ್ಷ ಕೆ.ಜಿ. ನಾಗರಾಜ ಮಾತನಾಡಿ, ಬರುವ ಫೆಬ್ರುವರಿ ತಿಂಗಳಿನಲ್ಲಿ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಬೇಕೆಂದು ನಿರ್ಧರಿಸಿದ್ದೇವೆ. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಅಗತ್ಯ ಎಂದರು.

ಸುದ್ದಿಗೋಷ್ಠಿಯಲ್ಲಿ ಆನಂದ ನಾಯ್ಕ ಹೊಸೂರು, ವಿ.ಎನ್. ನಾಯ್ಕ, ಎಸ್.ಎಂ. ನಾಯ್ಕ, ಎ.ಜಿ. ನಾಯ್ಕ, ದಿವಾಕರ ನಾಯ್ಕ ಹೆಮ್ಮನಬೈಲ್, ಪ್ರವೀಣ ವಾಟಗಾರ, ರವಿಕುಮಾರ ನಾಯ್ಕ, ಸುಧೀರ್ ನಾಯ್ಕ, ಮಹಾಬಲೇಶ್ವರ ನಾಯ್ಕ, ಜನಾರ್ದನ ನಾಯ್ಕ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಕಸಿತ ಭಾರತ ಅಭಿಯಾನ: 5 ಕೋಟಿ ಯುವಕರ ನೋಂದಣಿ ಗುರಿ: ಲೋಕೇಶ್ ಕುಮಾರ್
ಆಧ್ಯಾತ್ಮಿಕ ಬದುಕು ಕಟ್ಟಿಕೊಳ್ಳಲು ಭಗವದ್ಗೀತೆ ಮಾರ್ಗದರ್ಶಕ: ಸ್ವರ್ಣವಲ್ಲೀ‌ ಶ್ರೀ