
ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ವಿರೋಧಿಸಿ ನಡೆದ ರೈತರ ಸಭೆಯಲ್ಲಿ ಅಹವಾಲು ಸ್ವೀಕಾರ ಸಮಾರಂಭ ಉದ್ಘಾಟನೆ
ಕೊಟ್ಟ ಅವಕಾಶದಲ್ಲಿ ಪ್ರತಿ ದಿನ ಜನರ ಬದುಕಿನಲ್ಲಿ ಬದಲಾವಣೆ ಮಾಡಬೇಕು ಎಂಬುದು ದೃಢವಾದ ಸಂಕಲ್ಪ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬಾಳೆಹೊನ್ನೂರಿನಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ವಿರೋಧಿಸಿ ನಡೆದ ರೈತರ ಸಭೆಯಲ್ಲಿ ಜನರಿಂದ ಅಹವಾಲು ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನರ ಭಾವನೆಗಳನ್ನು ಆಧಾರವಾಗಿಟ್ಟುಕೊಂಡು ನಾನು ಎಂದೂ ರಾಜಕಾರಣ ಮಾಡಿಲ್ಲ. ಜನರ ಬದುಕನ್ನು ಆಧಾರವಾಗಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದೇನೆ. ಹಾಗಾಗಿ ಜನರ ಸಮಸ್ಯೆ ಆಲಿಸುವ ಉದ್ದೇಶದಿಂದ ಜನರ ಮುಂದೆ ಬಂದಿದ್ದೇನೆ ಎಂದರು.ದೇವರು ವರ ಅಥವಾ ಶಾಪ ಕೊಡುವುದಿಲ್ಲ. ಬದಲಿಗೆ ಅವಕಾಶ ಕೊಡುತ್ತಾನೆ. ನನಗೆ ಅವಕಾಶ ಸಿಕ್ಕಿದೆ. ಆ ಅವಕಾಶ ಬಳಸಿ ಜನರ ಬದುಕು ಬದಲಿಸುವ ಕೆಲಸ ಮಾಡುತ್ತೇನೆ ಎಂದರು.
ರಾಜ್ಯದ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗಲು ಬಿಡುವುದಿಲ್ಲ. ಒಂದು ವೇಳೆ ಅಂತ ಸ್ಥಿತಿ ಬಂದಿದ್ದೆ ಆದಲ್ಲಿ, ಕೇಂದ್ರ ಸರ್ಕಾರದ ಬಳಿಗೆ ಪ್ರತ್ಯೇಕ ಯೋಗ ಕೊಂಡೊಯ್ದು ಜನರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುತ್ತೇನೆ. ಹೀಗಾಗಿ ಯಾವೊಬ್ಬ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.
-- ಬಾಕ್ಸ್.....
ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ಇದ್ದೇವೆ. ಭರತ್ ಸಮೀಕ್ಷೆ ಕಾರ್ಯ ಮುಂದುವರಿದಿದ್ದು ಮತ್ತಷ್ಟು ತಾಲೂಕುಗಳು ಬರ ಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬರಗಾಲದ ಬಗ್ಗೆ ಹಿಂದೆಯೇ ಪ್ರಧಾನಿ ಎಚ್ಚರಿಕೆ ನೀಡಿದ್ದರು. ಮಲೆನಾಡು ಭಾಗದಲ್ಲಿ ಭೀಕರ ಬರದ ಸ್ಥಿತಿ ಇದೆ. ಬರ ನಿರ್ವಹಣೆಗೆ ಎಲ್ಲಾ ರೀತಿ ಮುಂಜಾಗ್ರತೆ ಕೈಗೊಳ್ಳಲಾಗಿದೆ ಡಿ.ಕೆ.ಶಿವಕುಮಾರ್ ಹೇಳಿದರು... ಬಾಕ್ಸ್....
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಪಾಲಿಸಿ ರೂಪಿಸಲು ತೀರ್ಮಾನಿ ಸ ಲಾಗಿದೆ. ಕೆಲವೇ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವ ಕೆ.ಜೆ.ಜಾರ್ಜ್ ನೂತನ ಪಾಲಿಸಿಯಲ್ಲಿ ಏನಿರಲಿದೆ ಎಂದು ಘೋಷಣೆ ಮಾಡಲಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಸಚಿವ ಸಂಪುಟ ಸಭೆ