ಮಧುಗಿರಿ ಕ್ಷೇತ್ರವನ್ನು ಡ್ರಗ್ಸ್ ಮುಕ್ತಗೊಳಿಸಲು ಸಂಕಲ್ಪ ಮಾಡಿ

KannadaprabhaNewsNetwork |  
Published : Jul 30, 2026, 01:15 AM IST
ಮಧುಗಿರಿಯ ಕನ್ನಡ ಭವನದಲ್ಲಿ ಪೋಲಿಸ್ ಇಲಾಖೆಯಿಂದ ಆಯೋಜಿಸಿದ್ದ ಡ್ರಗಸ್ ಮುಕ್ತ ಕರ್ನಾಟಕ  ಕಾರ್ಯಕ್ರಮವನ್ನು ಶಾಸಕ ಕೆ.ಎನ್. ರಾಜಣ್ಣ ಉದ್ಘಾಟಿಸಿ ಮಾತನಾಡಿದರು.  | Kannada Prabha

ಸಾರಾಂಶ

ನಶೆ ಮುಕ್ತ ಮಧುಗಿರಿ ಕ್ಷೇತ್ರವನ್ನಾಗಿ ಮಾಡಲು ಪ್ರತಿಯೊಬ್ಬರು ಸಂಕಲ್ಪ ಮಾಡಬೇಕೆಂದು ಶಾಸಕ ಕೆ.ಎನ್‌.ರಾಜಣ್ಣ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ನಶೆ ಮುಕ್ತ ಮಧುಗಿರಿ ಕ್ಷೇತ್ರವನ್ನಾಗಿ ಮಾಡಲು ಪ್ರತಿಯೊಬ್ಬರು ಸಂಕಲ್ಪ ಮಾಡಬೇಕೆಂದು ಶಾಸಕ ಕೆ.ಎನ್‌.ರಾಜಣ್ಣ ಕರೆ ನೀಡಿದರು.

ಇಲ್ಲಿನ ಕನ್ನಡ ಭವನದ ಕೆ.ಎನ್‌.ರಾಜಣ್ಣ ಅವರ ಸಭಾಂಗಣದಲ್ಲಿ ಬುಧವಾರ ತುಮಕೂರು ಜಿಲ್ಲಾ ಪೋಲಿಸ್ , ಮಧುಗಿರಿ ಉಪ ವಿಭಾಗ ಪೋಲಿಸ್ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಧುಗಿರಿ ಕ್ಷೇತ್ರವನ್ನು ಡ್ರಗ್ಸ್ ಮುಕ್ತಗೊಳಿಸಲು ಅಧಿಕಾರಿಗಳ ಜೊತೆ ಈಗಾಗಲೇ ಚರ್ಚಿಸಿದ್ದು, ಮುಂಬರುವ ದಿನಗಳಲ್ಲಿ ಎಲ್ಲರ ಸಹಕಾರದಿಂದ ನಶೆ ಮುಕ್ತ ತಾಲೂಕನ್ನಾಗಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ಸ್ವಯಂ ನಿಯಂತ್ರಣ ಹೊಂದಿ ಡ್ರಗ್ಸ್ ಸೇವನೆಯಿಂದ ಮಾನಸಿಕ ದೌರ್ಬಲ್ಯ ಉಂಟಾಗುತ್ತದೆ. ಮಕ್ಕಳು ಓದುವ ವಯಸ್ಸಿನಲ್ಲಿ ದುಶ್ಚಟಗಳಿಗೆ ದಾಸರಾಗದೇ ಸರ್ಕಾರದಿಂದ ದೊರೆಯುವ ಸಮವಸ್ತ್ರ,ನೋಟ್ ಪುಸ್ತಕ ಉಪಯೋಗಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು ಎಂದರು. ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾತನಾಡಿ, ಯುವ ಜನತೆ ಕೆಟ್ಟ ಚಟಗಳಿಗೆ ಬಲಿಯಾಗದೇ ಆರೋಗ್ಯವಂತ ಸಮಾಜ ಕಟ್ಟಲು ಶ್ರಮಿಸಬೇಕು ಎಂದರು.

ಡಿವೈಎಸ್ಪಿ ಮಂಜುನಾಥ್ ಮಾತನಾಡಿ, ಮಾದಕ ವಸ್ತುಗಳಿಂದ ಅಪರಾದ ಚಟುವಟಿಕೆಗಳು ಹೆಚ್ಚಿ ಯುವಕರು ದಾರಿ ತಪ್ಪುತ್ತಿದ್ದಾರೆ. ಆದ್ದರಿಂದ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಬೇಕು ಎಂದರು.

ಕಾರ್ಯಕ್ರಮದಲ್ಲಿ ಸಿಪಿಐ ಹನುಮಂತರಾಯಪ್ಪ, ತಹಸೀಲ್ದಾರ್ ನಂದಿನಿ, ಆರೋಗ್ಯ ಶಿಕ್ಷಣಾಧಿಕಾರಿ ಧರಣೀಶ್, ಗೌಡ,ತಾಪಂ ಇಒ ಉತ್ತಮ, ಬಿಇಒ ಹನುಮಂತರಾಯಪ್ಪ, ಕುರುಬರಹಳ್ಳಿ ಹರ್ಷ, ಪಿಎಸೈಗಳಾದ ಚಂದ್ರಶೇಖರ್, ರವೀಂದ್ರ, ಅರಣ್ಯಾಧಿಕಾರಿ ಸುರೇಶ್, ಪ್ರಾಂಶುಪಾಲ ರವಿ ಪ್ರಕಾಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಹಿತ್ಯ ಲೋಕಕ್ಕೆ ಹಡಪದ ಅಪ್ಪಣ್ಣ ಕೊಡುಗೆ ಅಪಾರ
ದೇಶದಲ್ಲೇ ಮೊದಲ ಬಾರಿ 138 ರೈತರಿಗೆ ಪ್ರಮಾಣಪತ್ರ