)
ರಾಮನಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಗೆ ಅರ್ಹ 97,965 ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ಮುಂದಿನ ಕಂತಿನ ಹಣ ಪಡೆಯಲಾಗದು. ಯೋಜನೆಯ ಅಡಿ ಜಿಲ್ಲೆಯಲ್ಲಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿದ್ದು, ಅವರಲ್ಲಿ ಇಲ್ಲಿಯವರೆಗೂ 97,965 ಜನ ಅರ್ಹ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಲ್ಲ.
ಇ-ಕೆವೈಸಿ ಏಕೆ ?:
ಆದಾಯ ಕರ ಪಾವತಿಸುವವರು, ಸರ್ಕಾರಿ, ಅರೆ ಸರ್ಕಾರಿ ನೌಕರಿಯಲ್ಲಿರುವ ಸದಸ್ಯರನ್ನು ಹೊಂದಿದ ರೈತ ಕುಟುಂಬದರು ಪಿಎಂ ಕಿಸಾನ್ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಯೋಜನೆಯ ಪ್ರಾರಂಭದಲ್ಲಿ ಕೆಲವರು ವ್ಯಾಪ್ತಿಗೆ ಬರದಿದ್ದರೂ ಹಣ ಪಡೆದು ನಂತರ ಹಿಂದಿರುಗಿಸಿದ್ದರು. ಪ್ರಸ್ತುತ ಯೋಜನೆ ಪ್ರಾರಂಭವಾಗಿ 7 ವರ್ಷ ಕಳೆದಿರುವುದರಿಂದ ಮೃತಪಟ್ಟವರು, ಜಮೀನು ಮಾರಾಟ ಮಾಡಿದವರು ಮೊದಲಾಗಿ ನಿಖರವಾದ ಸಮೀಕ್ಷೆಗೆ ಸರ್ಕಾರ ನಿರ್ಧರಿಸಿದೆ.ನಕಲಿ ಫಲಾನುಭವಿಗಳ ತಡೆಗೆ ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ಕೇಂದ್ರ ಸರ್ಕಾರ ರೈತರಿಗೆ ಬಯೋಮೆಟ್ರಿಕ್, ಫೇಸ್ ಆಧಾರಿತ ಇ-ಕೆವೈಸಿ ಕಡ್ಡಾಯಗೊಳಿಸಿದೆ.
ರೈತರು ಇ-ಕೆವೈಸಿಯನ್ನು ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ರಾಜ್ಯ ಸೇವಾ ಕೇಂದ್ರಗಳಾದ ಗ್ರಾಮ ಓನ್, ಕರ್ನಾಟಕ ಓನ್ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಮಾಡಿಸಬಹುದು. ಚಹರೆ ದೃಢೀಕರಣ ಇ-ಕೆವೈಸಿ ಮಾಡಿಕೊಳ್ಳಲು ಪಿಎಂ ಕಿನಾನ್ ಮೊಬೈಲ್ ಅಪ್ಲಿಕೇಶನ್ ಆ್ಯಪ್ನಲ್ಲಿ ಲಭ್ಯವಿದೆ. ಬೆರಳಚ್ಚು ಸಾಧ್ಯವಿಲ್ಲದವರಿಗೆ ಚಹರೆ ದೃಢೀಕರಣ ಮಾಡಿಸುವುದರ ಮೂಲಕ ಇ-ಕೆವೈಸಿ ಮಾಡಬಹುದಾಗಿದೆ.
ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿ:
ಬಾಕ್ಸ್ ...............
ತಾಲೂಕುಇ ಕೆವೈಸಿ ಮಾಡಿಸದ ರೈತರು
ಚನ್ನಪಟ್ಟಣ21,389
ಹಾರೋಹಳ್ಳಿ10,161
ಮಾಗಡಿ25,025ಒಟ್ಟು7,965
ಬಾಕ್ಸ್ .......................ಮುಂದಿನ ಕಂತಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾತಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ (ಏಪ್ರಿಲ್ - ಜುಲೈ, ಆಗಸ್ಟ್ - ನವೆಂಬರ್ , ಡಿಸೆಂಬರ್ - ಮಾರ್ಚ್ ) ಹಣ ಬಿಡುಗಡೆ ಮಾಡುತ್ತದೆ. ತಲಾ 2,000 ರು.ರಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರು.ಗಳ ಸಹಾಯಧನವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. 2026ರ ಜೂನ್ 20ರಂದು ಸರ್ಕಾರ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. 24ನೇ ಕಂತಿನ ಹಣ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆ ಆಗಲಿದೆ.
ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮುಂದಿನ ಕಂತನ್ನು ರೈತರ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗಳಿಗೆ ಪಡೆಯಲು ಅರ್ಹ ಫಲಾನುಭವಿಗಳಿಗೆ ವಾರ್ಷಿಕವಾಗಿ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಅನಿವಾರ್ಯ ಮತ್ತು ಕಡ್ಡಾಯವಾಗಿದೆ. ರೈತರು ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.ಕೋಟ್ ................
ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಲಾಭ ಪಡೆಯಲು ಬಾಕಿ ಉಳಿದಿರುವ 97,965 ರೈತರು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ರೈತರು ಆದಷ್ಟು ಶೀಘ್ರದಲ್ಲಿ ಇ-ಕೆವೈಸಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು.-ಅಂಬಿಕಾ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ.