ಪ್ರಧಾನಿ ಹೇಳಿಕೆಯಿಂದ ಜನರಲ್ಲಿ ಭಯ: ಎಚ್.ಕೆ. ಪಾಟೀಲ

KannadaprabhaNewsNetwork |  
Published : May 12, 2026, 02:30 AM IST
ಎಚ್.ಕೆ. ಪಾಟೀಲ | Kannada Prabha

ಸಾರಾಂಶ

ದೇಶದಲ್ಲಿ ಯಾವ ರೀತಿಯ ಪರಿಸ್ಥಿತಿ ಉಂಟಾಗಿದೆ ಎಂಬುದನ್ನು ಪ್ರಧಾನಿಯವರು ಜನತೆಗೆ ಸಂಪೂರ್ಣವಾಗಿ ವಿವರಿಸಬೇಕು. ಇಲ್ಲವಾದರೆ ಜನರಲ್ಲಿ ಗೊಂದಲ ಮತ್ತು ಭಯ ಉಂಟಾಗುತ್ತಿದೆ.

ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ಸಾರ್ವಜನಿಕ ಸಂದೇಶ ಜನರಲ್ಲಿ ಭಯ ಮೂಡಿಸುವಂತಿದೆ ಎಂದು ಕಾನೂನು ಸಚಿವ ಡಾ. ಎಚ್.ಕೆ. ಪಾಟೀಲ ತೀವ್ರ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೀಡಿದ ಸಂದೇಶದಿಂದ ದೇಶ ಗಂಭೀರ ಸನ್ನಿವೇಶವನ್ನು ಎದುರಿಸುತ್ತಿದೆಯೆಂಬ ಭಾವನೆ ಮೂಡುತ್ತಿದೆ. ಆದರೆ, ಈ ಸಂದೇಶದ ಹಿನ್ನೆಲೆ ಮತ್ತು ಉದ್ದೇಶ ಏನು ಎಂಬುದು ಸ್ಪಷ್ಟವಾಗಿಲ್ಲ. ಪಾರ್ಲಿಮೆಂಟ್‌ನಲ್ಲಿ ಈ ವಿಷಯ ಚರ್ಚೆಯಾಗಬೇಕಿತ್ತು ಎಂದರು.ಪ್ರಧಾನಿ ವಿದೇಶ ಪ್ರಯಾಣ ತಪ್ಪಿಸಲು, ಇಂಧನ ಬಳಕೆ ಕಡಿಮೆ ಮಾಡಲು ಕರೆ ನೀಡಿರುವುದರ ಹಿಂದೆ ಏನಿದೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ. ಫ್ಲೈಟ್‌ ಹಾರಾಟ ಕಡಿಮೆ ಮಾಡಬೇಕೆ, ಕೊರೋನಾ ಕಾಲದಂತೆ ವರ್ಚುವಲ್‌ ಸಭೆಗಳು ನಡೆಸಬೇಕೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರವೇ ನಿಯಮಾವಳಿ ರೂಪಿಸಬೇಕು. ಸಾರ್ವಜನಿಕರಿಗೆ ನೀಡಿದ ಸಂದೇಶಕ್ಕೆ ಅನುಗುಣವಾಗಿ ಸ್ಪಷ್ಟ ಮಾರ್ಗಸೂಚಿ ಇರಬೇಕು ಎಂದು ಒತ್ತಾಯಿಸಿದರು.ದೇಶದಲ್ಲಿ ಯಾವ ರೀತಿಯ ಪರಿಸ್ಥಿತಿ ಉಂಟಾಗಿದೆ ಎಂಬುದನ್ನು ಪ್ರಧಾನಿಯವರು ಜನತೆಗೆ ಸಂಪೂರ್ಣವಾಗಿ ವಿವರಿಸಬೇಕು. ಇಲ್ಲವಾದರೆ ಜನರಲ್ಲಿ ಗೊಂದಲ ಮತ್ತು ಭಯ ಉಂಟಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರಾನ್, ಇರಾಕ್, ಅಮೆರಿಕ ದೇಶಗಳ ನಡುವೆ ಏನಾದರೂ ಅಸಹಕಾರ ಉಂಟಾಗಿದೆಯೇ ಎಂಬುದರ ಕುರಿತು ಕೂಡ ಸ್ಪಷ್ಟತೆ ನೀಡಬೇಕೆಂದರು.ರಾಜ್ಯದ ಅಭಿವೃದ್ಧಿ ಹಾಗೂ ಉದ್ಯೋಗದ ವಿಷಯದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ವಿಬಿ ಜಿ ರಾಮ್‌ ಜಿ ಯೋಜನೆ ಇನ್ನೂ ನೋಟಿಫೈ ಆಗಿಲ್ಲ. ಅದಕ್ಕಾಗಿ ಹಣ ಬಿಡುಗಡೆ ಆಗುತ್ತಿಲ್ಲ. ಜನರು ಕೂಲಿ ಕೆಲಸ ಕೇಳುತ್ತಿದ್ದಾರೆ. ಆದರೆ ಯಾವ ಕೆಲಸ ಕೊಡಬೇಕು ಎಂಬ ಸ್ಪಷ್ಟತೆ ಇಲ್ಲ ಎಂದರು.ನರೇಗಾ ಕುರಿತು ಮಾತನಾಡಿದ ಅವರು, ಈ ಯೋಜನೆಯನ್ನು ಮುಚ್ಚಿಹಾಕಿದಂತಾಗಿದೆ. ಮುಂದಿನ ಪರಿಹಾರ ಏನು ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದರು.ಒಟ್ಟಾರೆ, ದೇಶ ಎದುರಿಸುತ್ತಿರುವ ಸನ್ನಿವೇಶದ ಬಗ್ಗೆ ಕೇಂದ್ರ ಸರ್ಕಾರ ತಕ್ಷಣ ಸಮಗ್ರ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು. ಪ್ರಧಾನಿ ಮೋದಿ ಹೇಳಿಕೆ ಖಂಡನಾರ್ಹ: ಸಚಿವ ಪಾಟೀಲ

ಗದಗ: ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಹುಡುಗಾಟದ ಮಾತುಗಳು ತೀವ್ರ ಖಂಡನಾರ್ಹ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ತೀವ್ರವಾಗಿ ಆಕ್ಷೇಪಿಸಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದ ಪ್ರಧಾನಿ, ಮತ್ತೊಂದು ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮಾತನಾಡುವುದು ಸರಿಯಲ್ಲ. ಅಂತಹ ವಿಷಯಗಳಲ್ಲಿ ಆಸಕ್ತಿ ತೋರಿಸುವುದು ಪ್ರಧಾನಿಗೆ ತಕ್ಕದ್ದು ಅಲ್ಲ, ವಿಜಯೇಂದ್ರ ಮಾತನಾಡಬೇಕಾದ ವಿಷಯವನ್ನು ದೇಶದ ಪ್ರಧಾನಿ ಮಾತನಾಡುತ್ತಿರುವುದು, ಅವರು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಪ್ರಧಾನಿ ಉಲ್ಲೇಖ ಮಾಡಿದ ಹಿನ್ನೆಲೆ ಪ್ರಶ್ನಿಸಿದ ಅವರು, ಸಿದ್ದರಾಮಯ್ಯನವರ ಬಗ್ಗೆ ನಿಮಗೆ ಅಷ್ಟೊಂದು ಗಾಬರಿ ಯಾಕೆ? ಈ ವಿಷಯ ನಿಮಗ್ಯಾಕೆ? ನಮ್ಮ ಪಕ್ಷದ ನಾಯಕರು ಅಥವಾ ಶಾಸಕರು ಬದಲಾವಣೆ ಮಾಡ್ತೇವೆ ಎಂದು ಯಾರಾದರೂ ನಿಮಗೆ ಹೇಳಿದ್ದಾರೆಯೇ ಎಂದು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ. ಸುಧಾಕರ್‌ ನಿಧನದಿಂದ ರಾಜಕೀಯ ಕ್ಷೇತ್ರಕ್ಕೆ ಹಾನಿಯಾಗಿದೆ-ಸಚಿವ ಸತೀಶ ಜಾರಕಿಹೊಳಿ
ಗುರು ಬಲದಿಂದ ಬಾಳು ಸುಭದ್ರ: ರಂಭಾಪುರಿಶ್ರೀ