ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಪ್ರಕರಣ ದಾಖಲು

KannadaprabhaNewsNetwork |  
Published : Jan 20, 2026, 02:30 AM IST
ಶ್ರೀರಾಮುಲು | Kannada Prabha

ಸಾರಾಂಶ

ಬಳ್ಳಾರಿ ನಗರದಲ್ಲಿ ಮಟ್ಕಾ, ಜೂಜಾಟ, ಗಾಂಜಾ ಬಳಕೆ ಯಥೇಚ್ಛವಾಗಿ ನಡೆಯುತ್ತಿದೆ. ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ನಗರ ಶಾಸಕರೇ ಮಟ್ಕಾ, ಜೂಜಾಟ ಕೃತ್ಯಗಳಿಗೆ ಬೆಂಬಲವಾಗಿ ನಿಂತಿದ್ದಾರೆ.

ಬಳ್ಳಾರಿ: ಬ್ಯಾನರ್ ಗಲಭೆ ಖಂಡಿಸಿ ನಗರದ ಎಪಿಎಂಸಿ ಬಳಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಬಾಲಕಿಯ ಹೆಸರನ್ನು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಇಲ್ಲಿನ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬಳ್ಳಾರಿ ನಗರದಲ್ಲಿ ಮಟ್ಕಾ, ಜೂಜಾಟ, ಗಾಂಜಾ ಬಳಕೆ ಯಥೇಚ್ಛವಾಗಿ ನಡೆಯುತ್ತಿದೆ. ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ನಗರ ಶಾಸಕರೇ ಮಟ್ಕಾ, ಜೂಜಾಟ ಕೃತ್ಯಗಳಿಗೆ ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ಯುವ ಸಮುದಾಯ ಹಾದಿ ತಪ್ಪಿದ್ದು, ನಾನಾ ದುಷ್ಕೃತ್ಯಗಳಿಗೆ ಆಸ್ಪದವಾಗಿದೆ ಎಂದು ಹೇಳುವ ಭರದಲ್ಲಿ ಬಿ.ಶ್ರೀರಾಮುಲು 2025ರ ಸೆಪ್ಟಂಬರ್‌ 12ರಂದು ಕೆಲ ಯುವಕರು ಗಾಂಜಾ ಸೇವಿಸಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣವನ್ನು ನೆನಪಿಸಿದರಲ್ಲದೆ, ಬಾಲಕಿಯ ಹೆಸರು, ಶಿಕ್ಷಣ ಸಂಸ್ಥೆ ಹಾಗೂ ಜಾತಿಯನ್ನು ಸಹ ಬಹಿರಂಗಪಡಿಸಿದರು.

ಈ ಹಿನ್ನೆಲೆಯಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?: ನಗರ ನಿವಾಸಿ ಬಾಲಕಿಯೊಬ್ಬಳಿಗೆ ಸಿಗರೇಟು, ಗಾಂಜಾ ಸೇದಿಸಿ ಮೂವರು ಯುವಕರು ಲೈಂಗಿಕ ಕಿರುಕುಳ ನೀಡಿ ಮಾನಸಿಕ ತೊಂದರೆ ನೀಡಿದ ಬಗ್ಗೆ ಯುವಕರ ವಿರುದ್ಧ ಬಾಲಕಿಯ ತಾಯಿ 2025ರ ಸೆಪ್ಟಂಬರ್‌ 19ರಂದು ನೀಡಿದ ದೂರಿನ ಮೇರೆಗೆ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಲಂ ಪ್ರಕರಣ ದಾಖಲಾಗಿತ್ತು. ಈ ಕುರಿತು ಬಿಜೆಪಿ ಪ್ರತಿಭಟನಾ ಸಮಾವೇಶದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಬಾಲಕಿಯ ಹೆಸರು, ಜನಾಂಗ ಹಾಗೂ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ಹೆಸರು ಪ್ರಸ್ತಾಪಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ
ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?