ಕನ್ನಡಪ್ರಭವಾರ್ತೆ, ಚಿತ್ರದುರ್ಗ
ನಗರದ ಪತ್ರಕರ್ತರ ಭವನದಲ್ಲಿ ಬಿಕೆ-ಕೆಬಿ ಬಳಗ ಮತ್ತು ಲಂಕೇಶ್ ವಿಚಾರ ವೇದಿಕೆಯಿಂದ ಆಯೋಜಿಸಿದ್ದ ಲಕ್ಕೂರು ಆನಂದ ಒಂದು ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆನಂದ ಅವರು ಮಾಡಿರುವ ಸಾಹಿತ್ಯ ಕೃಷಿಯನ್ನು ನಾಡಿಗೆ ವಿಸ್ತೃತವಾಗಿ ಪರಿಚಯಿಸಬೇಕಾದ ಅಗತ್ಯ ಇದೆ ಎಂದರು.
ಯುವ ಬರಹಗಾರ ಆನಂದ್ ತನ್ನ ಕಿರಿಯ ವಯಸ್ಸಿಗೆ ಸಾಹಿತ್ಯ, ಸಂಶೋಧನೆ, ಕಾವ್ಯದಲ್ಲಿ ಮಾಡಿರುವ ಕೆಲಸವನ್ನು ದಶಕಗಳ ಕಾಲ ಬದುಕಿರುವ ಕವಿ, ಸಾಹಿತಿಗಳು ಮಾಡಿ ತೋರಿಸಲಿ. ಆನಂದ್ ಬದುಕಿನ ದಾರಿ ಸ್ಪಷ್ಟವಾಗಿತ್ತು. ಅದನ್ನು ಗ್ರಹಿಸದೇ ಚಾರಿತ್ರ್ಯಹರಣ ಮಾಡುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಆನಂದ್ರಂಥ ಪ್ರತಿಭೆ ಯನ್ನು ಬಿತ್ತಿ ಬೆಳೆಯುವುದು ನಮಗೆ ಗೊತ್ತಿದೆ ಎಂದರು.ಪ್ರಾಧ್ಯಾಪಕ ವಿ.ಎಲ್.ನರಸಿಂಹಮೂರ್ತಿ ಮಾತನಾಡಿ, ಪ್ರತಿಯೊಬ್ಬ ಬರಹಗಾರ ನಾರ್ಸಿಸ್ಟ್ ಆಗಿರುತ್ತಾನೆ. ಆನಂದ್ ಕೂಡಾ ಮಹತ್ವಾಕಾಂಕ್ಷಿಯಾಗಿದ್ದ. ಶೋಷಿತ ಸಾಮಾಜಿಕ ಹಿನ್ನೆಲೆಯ ಆನಂದ್ಗೆ ನನ್ನ ಬರಹಗಳನ್ನು ಗುರುತಿಸಬೇಕು. ಮೆಚ್ಚುಗೆ ಸೂಚಿಸಬೇಕು ಅನ್ನುವ ಮನೋಧೋರಣೆ ಇತ್ತು. ಇದು ತಪ್ಪಲ್ಲ. ಆತ ಮಾಡಿರುವ ಕಾವ್ಯ, ಸಂಶೋಧನೆ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ ಎಂದರು.
ಕನ್ನಡ ಪುಸ್ತಕ ಪ್ರಾಕಾರದ ಸದಸ್ಯ ಡಾ.ರವಿಕುಮಾರ್ ನೀಹಾ ಮಾತನಾಡಿ, ಆನಂದ್ ಅದ್ಭುತ ಜೀವನ ಪ್ರೀತಿಯ ಗೆಳೆಯ. ಸದಾ ಕಾವ್ಯ, ಕಾದಂಬರಿಗಳು ಕುರಿತು ಮಾತ ನಾಡುತ್ತಿದ್ದ. ಮಾತಂಗ ಮಹಿಳಾ ಸಂಸ್ಕೃತಿ ಕುರಿತು ಅದ್ಭುತ ಪುಸ್ತಕ ಬರೆದಿದ್ದ. ಹೊಸ ಸಂಶೋಧನಾ ಮಾದರಿಗಳನ್ನು ಹುಡುಕುತ್ತಿದ್ದ. ಆತನ ಸಂಶೋಧನೆಯ ದಾರಿ, ಅಧ್ಯಯನ ಮಾಡುವ ಪ್ರಕ್ರಿಯೆ ವಿಭಿನ್ನವಾಗಿತ್ತು ಎಂದರು.
ಕೋಡಿಹಳ್ಳಿ ಸಂತೋಷ್ ಪ್ರಸ್ತಾವಿಕವಾಗಿ ಮಾತನಾಡಿದರು. ಜೆ.ಯಾದವರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಜಡೇಕುಂಟೆ ಮಂಜುನಾಥ್, ಹೊಳೆಯಪ್ಪ ಸಾಕ್ಯ ಇದ್ದರು.