ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ತಾಲೂಕು ಕಚೇರಿ ಎದುರು ಸೋಮವಾರ ಆಯೋಜಿಸಿದ್ದ ಲವ್ ಜಿಹಾದ್ ವಿರುದ್ಧದ ಪ್ರತಿಭಟನೆಗೆ ನಗರ ಪೊಲೀಸ್ ಕಮಿಷನರ್ ಅನುಮತಿ ನೀಡದ್ದನ್ನು ವಿರೋಧಿಸಿ ಸಮಿತಿ ಪ್ರಮುಖರಾದ ಶ್ರೀಲಕ್ಷ್ಮೀ ಮಠದಮೂಲೆ ಬಳಿಕ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಿಂದೂ ಸಮಾಜವನ್ನು ಲವ್ ಜಿಹಾದ್ ವಿರುದ್ಧ ಜಾಗೃತಿಗೊಳಿಸುವ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಪೊಲೀಸರ ಅಥವಾ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಆಗಿರಲಿಲ್ಲ. ಆದರೆ ಪೊಲೀಸ್ ಕಮಿಷನರ್ ಅನುಮತಿಸಲು ನಿರಾಕರಿಸಿದ್ದಾರೆ. ಇವರ ನಿರ್ಧಾರದ ಹಿಂದೆ ಯಾರೋ ಪ್ರಭಾವಿಗಳ ಒತ್ತಡ ಇರುವುದು ಭಾಸವಾಗುತ್ತಿದೆ ಎಂದರು.ಇನ್ನೋರ್ವ ಪ್ರಮುಖರಾದ ರೂಪಾ ಬಂಗೇರ ಮಾತನಾಡಿ, ಮಹಿಳೆಯರ ರಕ್ಷಣೆ, ಜಾಗೃತಿ ಕುರಿತು ಪ್ರತಿಭಟನೆ ನಡೆಸುವ ಹಕ್ಕು ಇಲ್ಲ ಎಂದಾದರೆ, ಮಹಿಳೆಯರ ಸುರಕ್ಷತೆಯನ್ನು ಗಮನಿಸುವ ಜವಾಬ್ದಾರಿ ಪೊಲೀಸ್ ಇಲಾಖೆಗೆ ಇಲ್ಲವೇ? ಇಂದಿನ ದಿನಗಳಲ್ಲಿ ಮನೆಯಿಂದ ಹೊರಗೆ ಹೋಗ ಮಹಿಳೆಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆ ಎಂಬ ಖಚಿತತೆ ಇಲ್ಲ. ಇಂತಹ ಸನ್ನಿವೇಶದಲ್ಲಿ ಮತಾಂತರ, ಲವ್ ಜಿಹಾದ್ಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದರು.
ಪ್ರಮುಖರಾದ ಶ್ವೇತಾ ಆದ್ಯಪಾಡಿ, ಸುಕನ್ಯಾ ರಾವ್ ಮತ್ತಿತರರಿದ್ದರು.