ಪ್ರತಿಭಟನೆಗೆ ಅನುಮತಿ ನಿರಾಕರಿಸುವ ಮೂಲಕ ನಾಗರಿಕ ಹಕ್ಕು ಕಸಿದ ಪೊಲೀಸರ: ಆರೋಪ

KannadaprabhaNewsNetwork |  
Published : Jul 16, 2024, 12:44 AM IST
ಶ್ರೀಲಕ್ಷ್ಮೀ ಮಠದಮೂಲೆ ಸುದ್ದಿಗೋಷ್ಠಿ | Kannada Prabha

ಸಾರಾಂಶ

ಮಂಗಳೂರಿನ ತಾಲೂಕು ಕಚೇರಿ ಎದುರು ಸೋಮವಾರ ಆಯೋಜಿಸಿದ್ದ ಲವ್‌ ಜಿಹಾದ್‌ ವಿರುದ್ಧದ ಪ್ರತಿಭಟನೆಗೆ ನಗರ ಪೊಲೀಸ್‌ ಕಮಿಷನರ್‌ ಅನುಮತಿ ನೀಡದ್ದನ್ನು ವಿರೋಧಿಸಿ ಹಿಂದು ಮಹಿಳಾ ಸುರಕ್ಷಾ ಸಮಿತಿ ಪ್ರಮುಖರಾದ ಶ್ರೀಲಕ್ಷ್ಮೀ ಮಠದಮೂಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮತಾಂತರ, ಲವ್‌ಜಿಹಾದ್‌, ಭಯೋತ್ಪಾದನೆ, ಡ್ರಗ್ ಮಾಫಿಯಾ ವಿರುದ್ಧ ಪ್ರತಿಭಟನೆಗೆ ಮಂಗಳೂರು ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಈ ಮೂಲಕ ಸಂವಿಧಾನದಲ್ಲಿ ಅಡಕವಾಗಿರುವ ನಾಗರಿಕ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದು ಹಿಂದು ಮಹಿಳಾ ಸುರಕ್ಷಾ ಸಮಿತಿ ಆರೋಪಿಸಿದೆ.

ಮಂಗಳೂರಿನ ತಾಲೂಕು ಕಚೇರಿ ಎದುರು ಸೋಮವಾರ ಆಯೋಜಿಸಿದ್ದ ಲವ್‌ ಜಿಹಾದ್‌ ವಿರುದ್ಧದ ಪ್ರತಿಭಟನೆಗೆ ನಗರ ಪೊಲೀಸ್‌ ಕಮಿಷನರ್‌ ಅನುಮತಿ ನೀಡದ್ದನ್ನು ವಿರೋಧಿಸಿ ಸಮಿತಿ ಪ್ರಮುಖರಾದ ಶ್ರೀಲಕ್ಷ್ಮೀ ಮಠದಮೂಲೆ ಬಳಿಕ ವಿಶ್ವ ಹಿಂದು ಪರಿಷತ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಿಂದೂ ಸಮಾಜವನ್ನು ಲವ್‌ ಜಿಹಾದ್‌ ವಿರುದ್ಧ ಜಾಗೃತಿಗೊಳಿಸುವ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಪೊಲೀಸರ ಅಥವಾ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಆಗಿರಲಿಲ್ಲ. ಆದರೆ ಪೊಲೀಸ್‌ ಕಮಿಷನರ್‌ ಅನುಮತಿಸಲು ನಿರಾಕರಿಸಿದ್ದಾರೆ. ಇವರ ನಿರ್ಧಾರದ ಹಿಂದೆ ಯಾರೋ ಪ್ರಭಾವಿಗಳ ಒತ್ತಡ ಇರುವುದು ಭಾಸವಾಗುತ್ತಿದೆ ಎಂದರು.

ಇನ್ನೋರ್ವ ಪ್ರಮುಖರಾದ ರೂಪಾ ಬಂಗೇರ ಮಾತನಾಡಿ, ಮಹಿಳೆಯರ ರಕ್ಷಣೆ, ಜಾಗೃತಿ ಕುರಿತು ಪ್ರತಿಭಟನೆ ನಡೆಸುವ ಹಕ್ಕು ಇಲ್ಲ ಎಂದಾದರೆ, ಮಹಿಳೆಯರ ಸುರಕ್ಷತೆಯನ್ನು ಗಮನಿಸುವ ಜವಾಬ್ದಾರಿ ಪೊಲೀಸ್‌ ಇಲಾಖೆಗೆ ಇಲ್ಲವೇ? ಇಂದಿನ ದಿನಗಳಲ್ಲಿ ಮನೆಯಿಂದ ಹೊರಗೆ ಹೋಗ ಮಹಿಳೆಯರು ಸುರಕ್ಷಿತವಾಗಿ ವಾಪಸ್‌ ಬರುತ್ತಾರೆ ಎಂಬ ಖಚಿತತೆ ಇಲ್ಲ. ಇಂತಹ ಸನ್ನಿವೇಶದಲ್ಲಿ ಮತಾಂತರ, ಲವ್‌ ಜಿಹಾದ್‌ಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದರು.

ವಕೀಲ ಹರೀಶ್‌ ಕುಮಾರ್‌, ದ.ಕ. ಸುರಕ್ಷಾ ಸಂಕುಲ ಸಂಚಾಲವಕ ಪುನೀತ್ ಅತ್ತಾವರ ಮಾತನಾಡಿದರು.

ಪ್ರಮುಖರಾದ ಶ್ವೇತಾ ಆದ್ಯಪಾಡಿ, ಸುಕನ್ಯಾ ರಾವ್‌ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಂದೇ ವರ್ಷದಲ್ಲಿ ರನ್ಯಾಳಿಂದ 1.27 ಕ್ವಿಂಟಲ್‌ ಚಿನ್ನ ಸ್ಮಗ್ಲಿಂಗ್!
ತಾಂತ್ರಿಕ ಶಿಕ್ಷಣದ ಕೊರತೆ ನೀಗಿಸಲು ಶ್ರಮಿಸಿ