ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ

KannadaprabhaNewsNetwork |  
Published : Oct 22, 2025, 01:03 AM IST
ಚಿತ್ರ : 21ಎಂಡಿಕೆ1 : ಕೊಡಗು ಎಸ್ಪಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿದರು.  | Kannada Prabha

ಸಾರಾಂಶ

ಪೊಲೀಸ್‌ ಸಂಸ್ಮರಣಾ ದಿನಾಚರಣೆಯು ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಗೌರವ ನಮನ:

ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಕುಮಾರ್, ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷರಾದ ಐ.ಪಿ.ಮೇದಪ್ಪ, ಜಿಲ್ಲಾ ಪೊಲೀಸ್ ಲಿಪಿಕ ಸಿಬ್ಬಂದಿ ಪರವಾಗಿ ಪಿ.ಎ.ನಂಜಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳ ಪರವಾಗಿ ಅಪ್ಪಯ್ಯ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೊಣ್ಣಪ್ಪ, ಜಿಲ್ಲಾ ಕಾರಾಗೃಹ ಪರವಾಗಿ ಸಂಜಯ್ ಜತ್ತಿ, ನಗರಸಭೆ ಪರವಾಗಿ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಸದಸ್ಯರಾದ ಅನಿತಾ ಪೂವಯ್ಯ, ವಕೀಲರ ಸಂಘದ ಪರವಾಗಿ ಸಿ.ಟಿ.ಜೋಸೆಫ್, ಮಾಧ್ಯಮಗಳ ಪರವಾಗಿ ಚಿನ್ನಸ್ವಾಮಿ, ರೋಟರಿ ಸಂಸ್ಥೆ ಪರವಾಗಿ ಲಲಿತ ರಾಘವನ್, ಲಯನ್ಸ್ ಸಂಸ್ಥೆ ಪರವಾಗಿ ಮದನ್, ವಾಣಿಜ್ಯೋದ್ಯಮಿಗಳ ಸಂಘ ಪರವಾಗಿ ಸಂತೋಷ್, ಹೋಟೆಲ್ ಅಸೋಸಿಯೇಷನ್ ಪರವಾಗಿ ದಿನೇಶ್, ಕೊಡವ ಸಮಾಜಗಳ ಪರವಾಗಿ ಎಂ.ಎನ್.ಮುತ್ತಪ್ಪ, ಗೌಡ ಸಮಾಜಗಳ ಪರವಾಗಿ ಸೂರ್ತಲೆ ಸೋಮಣ್ಣ, ಮುಸ್ಲಿಂ ಒಕ್ಕೂಟಗಳ ಪರವಾಗಿ ಅಮಿನ್ ಮೊಹಿಸಿನ್, ಪೊಲೀಸ್ ಉಪ ನಿರೀಕ್ಷರ ಪರವಾಗಿ ಗೋವಿಂದರಾಜು, ಬ್ಯಾಂಡ್ ಮಾಸ್ಟರ್ ಚೆನ್ನಕೇಶವ, ನಿಸ್ತಂತು ವಿಭಾಗದ ಪರವಾಗಿ ಧನಂಜಯ, ಮಹಿಳಾ ಪೊಲೀಸರ ಪರವಾಗಿ ಸುಮತಿ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೇಜರ್ ಕಾರ್ಯಪ್ಪ ಮತ್ತಿತರರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ, ಗೌರವ ನಮನ ಸಲ್ಲಿಸಿದರು.ನಂತರ ಪೊಲೀಸ್ ಕವಾಯತು ತಂಡದವರಿಂದ ಮೂರು ಸುತ್ತು ಕುಶಾಲತೋಪು ಹಾರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್ ತಂಡದವರು ರಾಷ್ಟ್ರಗೀತೆ ನುಡಿಸಿದರು. ಬಳಿಕ ಎರಡು ನಿಮಿಷ ಮೌನಾಚರಿಸಲಾಯಿತು. ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರ ಹೆಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ಮರಿಸಿದರು. 2024-25 ರ ಅವಧಿಯಲ್ಲಿ ದೇಶದ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ರಾಷ್ಟ್ರದಲ್ಲಿ 191 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹುತಾತ್ಮರಾಗಿದ್ದು, ಇವರಲ್ಲಿ 8 ಮಂದಿ ಕರ್ನಾಟಕ ರಾಜ್ಯದವರಾಗಿದ್ದಾರೆ. ಮೆಬೂಬ್ ಗುಡ್ಡಲಿಲ್ ಪಿಎಸ್‌ಐ (ಬೆಂಗಳೂರು ನಗರ), ವೆಂಕಟಾಚಲಪತಿ ಕೆ.ಎನ್ ಎಎಸ್‌ಐ (ಕೆಜಿಎಫ್), ಗಿರೀಶ್ ಎಸ್ ಎಆರ್‌ಎಸ್‌ಐ (ಡಿಎಆರ್ ತುಮಕೂರು), ಬಸವರಾಜ ಎಂ (ಬೆಂಗಳೂರು ಜಿಲ್ಲೆ), ನಿಂಗರಾಜ್ ಟಿ.ಎಸ್. (ಡಿಎಆರ್ ತುಮಕೂರು ಜಿಲ್ಲೆ), ಪ್ರಕಾಶ್ ಬಿ.ಯು (11 ನೇ ಪಡೆ ಕೆಎಸ್‌ಆರ್‌ಪಿ ಹಾಸನ), ಮಹೇಶ್ ಎನ್.ಆರ್. (ಬೆಂಗಳೂರು ನಗರ) ಹಾಗೂ ರಾಮಪ್ಪ ಪೂಜಾರಿ (ಡಿಎಆರ್ ದಾವಣಗೆರೆ ಜಿಲ್ಲೆ) ಇವರು ಸೇರಿದಂತೆ ಎಲ್ಲಾ ಪೊಲೀಸ್ ಹುತಾತ್ಮರ ಹೆಸರು ಓದಿದರು. ರಾಷ್ಟ್ರದ ಆಂತರಿಕ ಭದ್ರತೆಯಲ್ಲಿ ಪೊಲೀಸರ ಸೇವೆ ಅನುಪಮವಾದುದು, ಶಾಂತಿ-ಸುರಕ್ಷತೆ ಕಾಪಾಡುವುದು ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಹೆಚ್ಚಿನದ್ದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಸಮಾಜದಲ್ಲಿ ಎಲ್ಲರ ಶಾಂತಿ ಮತ್ತು ನೆಮ್ಮದಿಯ ಬದುಕಿಗೆ ಪೊಲೀಸರು ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ ಎಂದರು. ಪೊಲೀಸರ ಧೈರ್ಯ ಮತ್ತು ಸಾಹಸ ಶ್ಲಾಘನೀಯವಾಗಿದೆ. ಚೀನಾ ಗಡಿ ಭಾಗದ ರಕ್ಷಣೆಯಲ್ಲಿ ಜೀವವನ್ನು ಲೆಕ್ಕಿಸದೆ ರಾಷ್ಟ್ರದ ಗಡಿ ರಕ್ಷಣೆಗೆ ಪೊಲೀಸರು ಹೋರಾಡಿದ್ದಾರೆ ಎಂದು ಜಿ.ಪಂ.ಸಿಇಒ ಅವರು ಸ್ಮರಿಸಿದರು. ನೆಮ್ಮದಿಯ ಬದುಕು ಅತಿಮುಖ್ಯ:

ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗೆ ಕಾನೂನು ಸುವ್ಯವಸ್ಥೆ ಹಾಗೂ ನೆಮ್ಮದಿಯ ಬದುಕು ಅತಿಮುಖ್ಯವಾಗಿದೆ. ಆ ನಿಟ್ಟಿನಲ್ಲಿ ರಾಷ್ಟ್ರದ ಆಂತರಿಕ ಭದ್ರತೆಯಲ್ಲಿ ಪೊಲೀಸರ ಕಾರ್ಯನಿರ್ವಹಣೆ ಮೆಚ್ಚುವಂತದ್ದು ಎಂದು ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ರಾಷ್ಟ್ರದ ಆಂತರೀಕ ಮತ್ತು ಬಾಹ್ಯ ಭದ್ರತೆಯಲ್ಲಿ ಭಾರತೀಯ ಭೂಸೇನೆ, ವಾಯುಸೇನೆ ಹಾಗೂ ನೌಕಾಸೇನೆಯು ಪ್ರಮುಖ ಪಾತ್ರ ವಹಿಸುತ್ತವೆ. ಆ ದಿಸೆಯಲ್ಲಿ ರಾಷ್ಟ್ರದ ಆಂತರಿಕ ಭದ್ರತೆ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸರನ್ನು ಸ್ಮರಿಸಬೇಕಿದೆ. ಜೊತೆಗೆ ಅವರ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದರು. ಜಿಲ್ಲೆಯ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇತರರು ಇದ್ದರು, ಪೊಲೀಸ್ ಮುಖ್ಯಪೇದೆ ಫಾರುಕ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೈರತಿ ವಿರುದ್ಧ ಸಿಐಡಿ ಲುಕೌಟ್‌ ನೋಟಿಸ್‌
ಇಂಟರ್ನೆಟ್‌ ಸದ್ಭಳಕೆ, ಜಾಗೃತಿ ಅಗತ್ಯ: ಜವರೇಗೌಡ ಕಿವಿಮಾತು