ಕನ್ನಡಪ್ರಭ ವಾರ್ತೆ ಪುತ್ತೂರು
ಆಗ ಪೂವಪ್ಪ ಅವರು ‘ನನ್ನ ಫೋಟೊ ತೆಗೆದು ಯಾವ ಪ್ರಯೋಜನವಿಲ್ಲ. ಮೊದಲು ಎರಡೂ ಸಮುದಾಯವನ್ನ ಒಟ್ಟು ಸೇರಿಸಿ ದ.ಕ. ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಮಾತುಕತೆ ನಡೆಸಿ ಅದು ಬಿಟ್ಟು ನಮ್ಮ ಫೋಟೊ ತೆಗೆದುಕೊಂಡು ಹೋಗುವುದರಲ್ಲಿ ಅರ್ಥವಿಲ್ಲ. ನನಗೆ ೮೦ ವರ್ಷ ಆಯಿತು ಇನ್ನು ನಾನು ಹೋಗಿ ಗಲಾಟೆ ಮಾಡ್ಲಿಕೆ ಸಾಧ್ಯ ಆಗುತ್ತಾ?. ವಿಚಾರಣೆ ಹಿಂದೂಗಳಿಗೆ ಮಾತ್ರ ಆದ್ರೆ ಕಷ್ಟ, ಬದಲಾಗಿ ಎರಡೂ ಕಡೆಯವರನ್ನ ಕರೆದು ವಿಚಾರಿಸಿ’ ಎಂದು ಬುದ್ಧಿವಾದ ಹೇಳಿದ್ದಾರೆ. ಪೊಲೀಸರು ನನಗೆ ಗೌರವ ಕೊಟ್ಟು ವಿಚಾರಿಸಿದ್ದಾರೆ, ಬಳಿಕ ಪೊಲೀಸರಿಗೂ ಸಲಹೆ ಕೊಟ್ಟಿದೇನೆ. ಸಾಧ್ಯ ಆಗುವುದಾದ್ರೆ ಎರಡೂ ಸಮುದಾಯವನ್ನ ಒಟ್ಟು ಸೇರಿಸಿ ವಿಚಾರಣೆ ಮಾಡಿ ಎಂದಿದ್ದೇನೆ. ನಾನು ಪೊಲೀಸರು ಬರುವಾಗ ಒಂದು ಟವಲ್ ಸುತ್ತಿಕೊಂಡಿದ್ದೆ. ಆ ಬಟ್ಟೆಯಲ್ಲಿ ಫೋಟೊ ತೆಗೆದುಕೊಂಡು ಪೊಲೀಸರು ಹೋಗಿದ್ದಾರೆ ಎಂದು ಪೂವಪ್ಪ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಕೆಲವೊಂದು ಮನೆಗೆ ಪೊಲೀಸರು ರಾತ್ರಿ ಹೊತ್ತಿನಲ್ಲಿ ಹೋಗಿ ಮನೆಯವರನ್ನು ಎಬ್ಬಿಸಿ ಮನೆಯ ಮುಂಬಾಗ ನಿಲ್ಲಿಸಿ ಅವರ ಜಿಪಿಎಸ್ ಫೋಟೋ ತೆಗೆಯುವ ಪ್ರಕ್ರಿಯೆ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದೆ.