ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೊಲೀಸರು

KannadaprabhaNewsNetwork |  
Published : Oct 13, 2024, 01:02 AM ISTUpdated : Oct 13, 2024, 01:03 AM IST
ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಪೊಲೀಸರು ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದರು. | Kannada Prabha

ಸಾರಾಂಶ

ಠಾಣೆಗಳ ಎಲ್ಲಾ ಪೊಲೀಸ್ ವಾಹನಗಳು ಹಾಗೂ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಪೊಲೀಸರು ದೇವರಿಗೆ ನಮಿಸಿ, ಸಿಹಿ ಹಂಚಿದರು.

ಚಾಮರಾಜನಗರ:

ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಪೊಲೀಸರು ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದರು.

ಭಾರತದಲ್ಲಿ ಪ್ರಮುಖ ಆಚರಣೆಯಾದ ಆಯುಧ ಪೂಜೆಯನ್ನು ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಠಾಣೆಗಳಲ್ಲಿ ಪೊಲೀಸರು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಠಾಣೆಗಳ ಎಲ್ಲಾ ಪೊಲೀಸ್ ವಾಹನಗಳು ಹಾಗೂ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಪೊಲೀಸರು ದೇವರಿಗೆ ನಮಿಸಿ, ಸಿಹಿ ಹಂಚಿದರು.

ವರ್ಷಪೂರ್ತಿ ಖಾಕಿ ಧರಿಸಿ ಖದರ್ ತೋರುತ್ತಿದ್ದ ಪೊಲೀಸರು ಆಯಧ ಪೂಜೆ ಪ್ರಯುಕ್ತ ಸಾಂಪ್ರದಾಯಿಕ ದಿರಿಸಾದ ಪಂಚೆ, ಶರ್ಟ್, ಶಲ್ಯ ಹೊದ್ದು ಮಹಿಳಾ ಸಿಬ್ಬಂದಿ ಸೀರೆ ಉಟ್ಟು ಜಿಲ್ಲೆಯ ಗುಂಡ್ಲುಪೇಟೆ, ಕುದೇರು, ಹನೂರು, ತೆರಕಣಾಂಬಿ ಠಾಣೆ ಪೊಲೀಸರು ಸಂಭ್ರಮಿಸಿದರು.

ಆಯುಧ ಪೂಜೆ ಹಿನ್ನೆಲೆ ಗುಂಡ್ಲುಪೇಟೆ ಠಾಣೆಗೆ ವಿದ್ಯುತ್ ದೀಪಾಲಂಕಾರ ಮಾಡಿದ್ದು ಗಮನ‌ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!