ಕನ್ನಡಪ್ರಭ ವಾರ್ತೆ, ಶಿಕಾರಿಪುರ
ಪಟ್ಟಣದ ದಿ. ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಭಾನುವಾರ ಸಂಜೆ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ರವರ ಹುಟ್ಟುಹಬ್ಬ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಹಾಗೂ ವಿಜಯೇಂದ್ರ ಅಭಿಮಾನಿ ಬಳಗ ವತಿಯಿಂದ ಆಯೋಜಿಸಲಾದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ದಿಸೆಯಲ್ಲಿ ಸ್ವಾತಂತ್ರ್ಯ ದೊರೆತ 75 ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಒಲಂಪಿಕ್ ಕ್ರೀಡೆಯಲ್ಲಿ 108 ಪದಕ ಗಳಿಸಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಭಾರತ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮೆರೆದಿದೆ. ಕೇವಲ ಜನಸಂಖ್ಯೆಯಲ್ಲಿ ಹೆಚ್ಚಾಗಿದ್ದ ಭಾರತ ಇದೀಗ ಎಲ್ಲ ಕ್ಷೇತ್ರದಲ್ಲಿ ಸಾಧನೆ ಮೂಲಕ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಕೈಗೊಂಡ ಏತ ನೀರಾವರಿ ಯೋಜನೆಯಿಂದಾಗಿ ಬರಗಾಲದಲ್ಲಿಯೂ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪುರದಕೆರೆಯಿಂದ ತಾಲೂಕಿನ ಕೆರೆಗೆ ನೀರು ತುಂಬಿಸುವ ಕಾರ್ಯದಿಂದಾಗಿ ಈಗಾಗಲೇ 200ಕ್ಕೂ ಹೆಚ್ಚು ಕೆರೆಗೆ ನೀರು ತುಂಬಿಸಲಾಗಿದೆ. 500 ಎಚ್ಪಿ ಮೋಟಾರ್ನಿಂದ ನಿತ್ಯ ನೀರನ್ನು ತುಂಬಿಸಲಾಗುತ್ತಿದ್ದು, ಮಳೆಯ ಅಭಾವದಿಂದ ಕೆಲವು ದಿನದಿಂದ ನೀರಿನ ಪ್ರಮಾಣ ಕಡಿಮೆ ಆಗುತ್ತಿದೆ ಎಂದು ತಿಳಿಸಿದರು.
ತಾಲೂಕಿನ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆಗೈಯಲು ಸಹಕಾರಿ ಆಗುವಂತೆ ಉತ್ತೇಜನ ನೀಡಲು ಯುವ ಮೋರ್ಚಾ ಸಿದ್ಧವಾಗಿರಬೇಕು. ರಾಜಕೀಯ ಪಕ್ಷ ಕೇವಲ ಚುನಾವಣೆಗೆ ಮಾತ್ರ ಸೀಮಿತ ಆಗಬಾರದು. ಕ್ರೀಡೆ, ಸಾಂಸ್ಕೃತಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಮುಖಂಡ ಎಚ್.ಟಿ. ಬಳಿಗಾರ್, ಚನ್ನವೀರಪ್ಪ, ವಸಂತಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಹನುಮಂತಪ್ಪ ಸಂಕ್ಲಾಪುರ, ಯುವ ಮೋರ್ಚಾ ಅಧ್ಯಕ್ಷ ಶಿವರಾಜ್, ಕನ್ನಡ ಯುವಕ ಸಂಘದ ಅಧ್ಯಕ್ಷ ರಾಜು, ಸುಧೀರ ಮಾರವಳ್ಳಿ, ರಾಜಶೇಖರ ಗೌಡ, ಗಿರೀಶ ಧಾರವಾಡದ ಮತ್ತಿತರರು ಉಪಸ್ಥಿತರಿದ್ದರು.
ಕೋಟ್ ರಾಜಕೀಯ ಪಕ್ಷ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದು ಮಾತ್ರವಲ್ಲದೇ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಈ ದಿಸೆಯಲ್ಲಿ ಶಾಸಕ ವಿಜಯೇಂದ್ರ ಹುಟ್ಟುಹಬ್ಬದ ಸಂದರ್ಭದಲ್ಲಿ ವಾಲಿಬಾಲ್ ಕ್ರೀಡೆ ಆಯೋಜಿಸುವ ಮೂಲಕ ಯುವ ಮೋರ್ಚಾ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಉತ್ತಮ ಕಾರ್ಯವನ್ನು ಕೈಗೊಂಡಿದೆ
- - - -5ಕೆಎಸ್.ಕೆಪಿ2: