ಕನ್ನಡಪ್ರಭ ವಾರ್ತೆ ಕುಣಿಗಲ್
ತಾಲೂಕಿನ ಜಾಣಗೆರೆ ಸರ್ಕಾರಿ ಶಾಲೆಯ ಕಲಾ ವೈಭವ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಉಳಿಯಬೇಕಾದರೆ ಕನ್ನಡ ಶಾಲೆಗಳು ಉಳಿಯಬೇಕು ಕನ್ನಡ ಪ್ರಾರ್ಥಮಿಕ ಶಿಕ್ಷಣ ಕಡ್ಡಾಯ ಆಗಬೇಕು, ಕೇವಲ ವಾಣಿಜ್ಯ ಉದ್ದೇಶದಿಂದ ಇಂಗ್ಲಿಷ್ ಶಾಲೆಗಳನ್ನು ಪ್ರಾರಂಭಿಸುತ್ತಾ ಜೇಬು ತುಂಬಿಸಿಕೊಳ್ಳುವ ಕೆಲಸವನ್ನು ಇಂದಿನ ರಾಜಕಾರಣಿಗಳು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಹಲವಾರು ಶಾಲೆಗಳು ಮುಚ್ಚಿವೆ, ಇನ್ನೂ ಕೆಲವು ಮುಚ್ಚುವ ಹಂತದಲ್ಲಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಈ ಬಗ್ಗೆ ಉದಾಸಿನ ತೋರುತ್ತಿರುವುದು ಸರಿಯಿಲ್ಲ. ತಕ್ಷಣ ಇದರ ಬಗ್ಗೆ ಜಾಗೃತಿ ವಹಿಸಬೇಕು. ಇಲ್ಲದಿದ್ದರೆ ಮತ್ತೊಂದು ಬಾರಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.ಸಿದ್ದರಾಮಯ್ಯ ಚೈತನ್ಯ ಸ್ವಾಮೀಜಿ ಮಾತನಾಡಿ, ಖಾಸಗಿ ಶಾಲೆಗಳಿಗೆ ಪೈಪೋಟಿ ಕೊಡುವ ನಿಟ್ಟಿನಲ್ಲಿ ಜಾಣಗೆರೆ ಸರ್ಕಾರಿ ಶಾಲೆ, ವಾರ್ಷಿಕೋತ್ಸವ ಮಾಡುತ್ತಿರುವುದು ಅಭಿನಂದನ ವಿಚಾರ, ಗ್ರಾಮಸ್ಥರು ಉತ್ತಮ ಸಹಕಾರ ನೀಡಿದ್ದಾರೆ. ಶಾಲೆಗೆ ಬೇಕಾದ ಬಸ್ ವ್ಯವಸ್ಥೆ ಸೇರಿದಂತೆ ಎಲ್ಲವನ್ನು ಕೂಡ ದಾನಿಗಳು ಸಹಕಾರದಿಂದ ಇಲ್ಲಿನ ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷಕರು ಮಾಡಿರುವುದು ಇಷ್ಟೆಲ್ಲಾ ಸಾಧನೆಗೆ ಕಾರಣವಾಗಿದೆ ಎಂದು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೋರೇಗೌಡ, ಎಸ್ಡಿಎಂಸಿ ಅಧ್ಯಕ್ಷ ವೆಂಕಟೇಶ್, ಜ್ಞಾನಜೋತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಜಯ್,
ವಿಶೇಷವಾದ ಕೊರಿಯೋಗ್ರಾಫಿ ಮೂಲಕ ಉತ್ತಮ ಸಾಂಸ್ಕೃತಿಕ ಹಾಗೂ ಮನರಂಜನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.