
ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ಸಂಸ್ಥಾಪನಾ ದಿನಾಚರಣೆ ಹಾಗೂ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು
ಶಾಲಾಕಾಲೇಜು ಮಕ್ಕಳು ಪುಸ್ತಕ ಓದಬೇಕು. ಪುಸ್ತಕಗಳಲ್ಲಿ ಸಿಗುವ ಜ್ಞಾನ ಮೊಬೈಲ್ಗಳಲ್ಲಿ ಸಿಗುವುದಿಲ್ಲ, ಪುಸ್ತಕಗಳಲ್ಲಿ ಬಹುಮುಖಿ ಜ್ಞಾನ ದೊರೆಯುತ್ತದೆ. ಕನ್ನಡ ಭಾಷೆ ಸಾಹಿತ್ಯ, ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು 112 ವರ್ಷಗಳ ಹಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾಗಲು ಕಾರಣರಾದರು. ಅಂದಿನಿಂದ ಇಂದಿನವರೆಗೆ ಪರಿಷತ್ತು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪುಸ್ತಕ ಸಂಸ್ಕೃತಿ ಬೆಳೆಸುವ ಚಟುವಟಿಕೆ ನಡೆಸಿಕೊಂಡು ಬರುತ್ತಿದೆ. ಸರ್ಕಾರ ಹಾಗೂ ದಾನಿಗಳು ಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಮಾತನಾಡಿ, ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿಲ್ಲಬಾರದು, ನಿರಂತರವಾಗಿ ಮುನ್ನಡೆಯಬೇಕು. ಪರಿಷತ್ತಿನ ಚಟುವಟಿಕೆ ನಡೆದುಬಂದಿರುವುದೇ ರಾಜಾಶ್ರಯದಲ್ಲಿ ನಂತರ ಸರ್ಕಾರದ ಅನುದಾನದಲ್ಲಿ, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರಿಷತ್ತಿಗೆ ಸಹಾಯ ಮಾಡುತ್ತಿದ್ದಾರೆ. ಬೇಡುವ ಕೈ ಶುದ್ಧವಾಗಿದ್ದರೆ ಕೊಡುವ ಕೈಗಳಿಗೆ ಕೊರತೆಯಿಲ್ಲ ಎಂದರು.
ಈ ವೇಳೆ ದೇವಪ್ರಕಾಶ್ ಮಾತೃಶ್ರೀ ಭಾಗೀರಥಮ್ಮ ದತ್ತಿ ಪ್ರಶಸ್ತಿಯನ್ನು ಸುಶೀಲ ಸದಾಶಿವಯ್ಯ ಅವರಿಗೆ ಪ್ರವಾಸ ಸಾಹಿತ್ಯಕ್ಕಾಗಿ, ಮಕ್ಕಳ ಸಾಹಿತ್ಯದ ಶಾಂಪುರ ಭಾಗೀರಥಮ್ಮ ನೆನಪಿನ ಪ್ರಶಸ್ತಿಯನ್ನು ಪ.ನಾ. ಹಳ್ಳಿ ಹರೀಶ್ಕುಮಾರ್ ಅವರಿಗೆ, ದೇವಪ್ರಕಾಶ್ ಹಾಸ್ಯ ಸಾಹಿತ್ಯ ಪ್ರಶಸ್ತಿಯನ್ನು ತುರುವೇಕೆರೆ ಮಂಜೇಶ್ ಅವರಿಗೆ ಹಾಗೂ ದೇವಪ್ರಕಾಶ್ ಮಾಧ್ಯಮ ಪ್ರಶಸ್ತಿಯನ್ನು ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಟಿ.ಆರ್. ರೇಣುಕಾಪ್ರಸಾದ್ ಹಾಗೂ ಟಿ.ಎಚ್. ಸುರೇಶ್ ಅವರಿಗೆ ಪ್ರದಾನ ಮಾಡಲಾಯಿತು.