ಕನ್ನಡಪ್ರಭ ವಾರ್ತೆ ಹಲಗೂರು
ಬಿಜೆಪಿ ಮುಖಂಡ ಜಿ.ಕೆ.ನಾಗೇಶ್ ಮಾತನಾಡಿ, ಎನ್ ಡಿಎ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಅದಕ್ಕಾಗಿ ಮನೆಮನೆಗೆ ತೆರಳಿ ಕುಮಾರಣ್ಣನ ಸಾಧನೆ ಬಗ್ಗೆ ಹಾಗೂ ಮೋದಿಯವರ ಕೈ ಬಲಪಡಿಸಲು ಜೆಡಿಎಸ್ ಅಭ್ಯರ್ಥಿ ಅಧಿಕ ಮತಗಳಿಂದ ಗೆಲ್ಲಲೇಬೇಕು ಎಂದು ಪ್ರಚಾರ ನಡೆಸುತ್ತಿರುವುದಾಗಿ ತಿಳಿಸಿದರು.
ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿಕನ್ನಡಪ್ರಭ ವಾರ್ತೆ ಮಂಡ್ಯಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ, ದುರ್ಬಲ ವರ್ಗಗಳ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಹಿತ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ೫ ಗ್ಯಾರಂಟಿ ಯೋಜನಗಳನ್ನು ಜಾರಿ ಮಾಡುವ ಮೂಲಕ ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿ ಕೆಂಪಯ್ಯ ಸಾಗ್ಯ ಮನವಿ ಮಾಡಿದರು.
ಲೋಕಸಭೆಯಲ್ಲಿ ಬಹುಮತವನ್ನೇ ಬಳಸಿಕೊಂಡು, ನಿರಂಕುಶ ಸರ್ವಾಧಿಕಾರದತ್ತ ಸಾಗಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮತ್ತು ಚುನಾವಣಾ ಆಯೋಗದಂತಹ ಸಂಸ್ಥೆಗಳನ್ನು ಹಂತ ಹಂತವಾಗಿ ನಿಷ್ಕ್ರೀಯಗೊಳಿಸಿ, ಸ್ವಾಯತ್ತತೆಯನ್ನು ನಿರರ್ಥಕಗೊಳಿಸಿ ಅವುಗಳ ಮೇಲೆ ಹಿಡಿತ ಸಾಧಿಸಲು ಹೊರಟಿದೆ ಎಂದು ದೂರಿದರು.ಮುಖಂಡರಾದ ಎನ್.ರಮಾನಂದ, ಕುಬೇರಪ್ಪ, ಎಚ್.ಸುರೇಶ ಇತರರು ಗೋಷ್ಠಿಯಲ್ಲಿದ್ದರು.