ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಹಳೇಬೂದನೂರು, ಹೊಸಬೂದನೂರು, ಶ್ರೀನಿವಾಸಪುರ, ಚಿಕ್ಕಮಂಡ್ಯ, ಸಾತನೂರು ಗ್ರಾಮಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರ ಪರ ಮತ ಯಾಚಿಸಿದರು.
ನಾಡಿನ ಜನರ ಜೀವ ನದಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ಕಟ್ಟುತ್ತೇವೆ ಎಂದು ಕಳೆದ ವಿಧಾನ ಸಭಾ ಚುನಾವಣೆ ಸಮಯದಲ್ಲಿ ಘೋಷವಾಕ್ಯ ಮೊಳಗಿಸಿ ಪಾದಯಾತ್ರೆ ನಡೆಸಿದರು. ಅಧಿಕಾರಕ್ಕೆ ಬಂದ ಮೇಲೆ ಮೇಕೆದಾಟು ಅಣೆಕಟ್ಟು ಯೋಜನೆಯನ್ನೇ ಮರೆತಿದ್ದಾರೆ. ನಾಡಿನ ಜನರ ಹಿತ ಕಾಪಾಡುವ ಮನಸ್ಸಿದ್ದರೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ‘ಇಂಡಿಯಾ’ ಮೈತ್ರಿಕೂಟದಲ್ಲಿರುವ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಜೊತೆ ಚರ್ಚಿಸಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಮೂಲಕ ತಮ್ಮ ಬದ್ಧತೆ ಪ್ರದರ್ಶಿಸಬೇಕು. ನೀರಿನ ವಿಚಾರದಲ್ಲಿ ಪೊಳ್ಳು ಹೋರಾಟ ಮಾಡುವುದಲ್ಲ ಎಂದು ಛೇಡಿಸಿದರು.ಗ್ರಾಮ ವಾಸ್ತವ್ಯದ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದ, ರೈತರ ಸಾಲ ಮನ್ನಾ ಮಾಡಿ ರೈತರಿಗೆ ಆರ್ಥಿಕ ಭದ್ರತೆ ಒದಗಿಸಿದ ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಜನರು ಕೈ ಹಿಡಿಯುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ, ಉಪಾಧ್ಯಕ್ಷ ಎಂ.ಎಸ್. ರಘುನಂದನ್, ತಾಲ್ಲೂಕು ಜಾ.ದಳ ಅಧ್ಯಕ್ಷ ಬೂದನೂರು ಸ್ವಾಮಿ, ಬಿಜೆಪಿ ಮುಖಂಡ ಅಶೋಕ್ ಜಯರಾಮ್, ಮುಖಂಡರಾದ ಅಮರಾವತಿ ಚಂದ್ರಶೇಖರ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸಿ.ಅಶ್ವತ್ಥ್ ಇತರರಿದ್ದರು.