ಕನ್ನಡಪ್ರಭ ವಾರ್ತೆ ಖಾನಾಪುರ
ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಈ ಕಾಲೇಜಿಗೆ ತಾಲೂಕಿನ ಮಾಜಿ ಶಾಸಕ ವಿ.ವೈ. ಚವಾಣ ಅವರ ಹೆಸರನ್ನು ಇರಿಸಲಾಗಿದೆ. ಪಾಲಿಟೆಕ್ನಿಕ್ ಕಾಲೇಜ್ಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಡಿಪ್ಲೋಮಾ ತರಗತಿಗಳನ್ನು ನಡೆಸಲು ಅವಶ್ಯವಿರುವ ಸುಸಜ್ಜಿತ ತರಗತಿಗಳು, ಲ್ಯಾಬ್ಗಳು ಸಿದ್ಧವಾಗಿವೆ. ನುರಿತ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಆರ್ಥಿಕವಾಗಿ ಅಶಕ್ತ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ವಿಶೇಷ ವಿನಾಯಿತಿಯನ್ನು ನೀಡಲಾಗುತ್ತದೆ ಎಂದು ವಿವರಿಸಿದರು.ಕಾಲೇಜಿನ ಕೋ-ಆರ್ಡಿನೇಟರ್ ಡಾ.ಡಿ.ಎನ್.ಮಿಸಾಳೆ ಮಾತನಾಡಿ, ಎಐಸಿಟಿಇ ವತಿಯಿಂದ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮೂನಿಕೇಷನ್, ಕಂಪ್ಯೂಟರ್ ಸೈನ್ಸ್, ಎ.ಐ ಆ್ಯಂಡ್ ಮಶೀನ್ ಲರ್ನಿಂಗ್ ಮತ್ತು ಮೆಕ್ಯಾಟ್ರಾನಿಕ್ಸ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅನುಮತಿ ದೊರೆತಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ ಎಂದರು.ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತ್ಯವರ ನಾಯ್ಕ, ಪಿಯು ಕಾಲೇಜಿನ ಪ್ರಾಚಾರ್ಯೆ ಶರಯೂ ಕದಮ, ಮಾಜಿ ಶಾಸಕ ವಿ.ವೈ.ಚವಾಣ ಪುತ್ರ ಪ್ರಕಾಶ ಚವಾಣ ಹಾಗೂ ಇತರರು ಇದ್ದರು.