ಪೊನ್ನಾಡ್ ಫಾರ್ಮರ್ ಪ್ರೊಡ್ಯುಸರ್ ಕಂಪನಿ ಲಿಮಿಟೆಡ್ ಪ್ರಮುಖರನ್ನು ಇಶಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಪ್ರತಿಷ್ಠಿತ ಸಿಐಐ – ಎಫ್ಪಿಒ ಎಕ್ಸಲೆನ್ಸಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಾಪೋಕ್ಲುವಿನ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ನ ಪ್ರಮುಖರನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ನಲ್ಲಿ ಬುಧವಾರ ನಡೆದ ಮಹಾಶಿವರಾತ್ರಿ ಆಚರಣೆ ಸಂದರ್ಭ ಇಶಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಮಸ್ತ ರೈತರ ಪರವಾಗಿ ನಾಪೋಕ್ಲುವಿನ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ನಿರ್ದೇಶಕರಾದ ಕೇಟೋಳಿರ ರತ್ನ ಚರ್ಮಣ ಹಾಗೂ ಕೋಡಿರ ಪ್ರಸನ್ನ ಅವರನ್ನು ಇಶಾ ಫೌಂಡೇಶನ್ ನ ಸದ್ಗುರು ಜಗ್ಗಿ ವಾಸುದೇವ್ ಅವರು ಸನ್ಮಾನಿಸಿದರು.
ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಸನ್ಮಾನ ಸ್ವೀಕರಿಸುವ ಸಂದರ್ಭ ಗೃಹ ಸಚಿವ ಅಮಿತ್ ಶಾ, ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಮುರುಗನ್ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.