ಪಾಂಗಳಾಯಿ ಅರಸು ಮುಂಡ್ಯತ್ತಾಯ ನೇಮೋತ್ಸವ

KannadaprabhaNewsNetwork |  
Published : Jan 05, 2026, 03:00 AM IST
ಫೊಟೋ: ೪ಪಿಟಿಆರ್-ಪಾಂಗಳಾಯಿಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಿತು. | Kannada Prabha

ಸಾರಾಂಶ

ಕಾರಣಿಕ ಕೇತ್ರವಾಗಿರುವ ಪರ್ಲಡ್ಕದ ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ, ಗಣಹೋಮ, ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮ ದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಕಾರಣಿಕ ಕೇತ್ರವಾಗಿರುವ ಪರ್ಲಡ್ಕದ ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ಪೂಜೆ, ಗಣಹೋಮ, ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮ ದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ನಡೆಯಿತು.

ಶನಿವಾರ ಬೆಳಗ್ಗೆ ಗಣಹೋಮ, ಕಲಶ ಪೂಜೆ, ನಾಗತಂಬಿಲ, ಸಾಮೂಹಿಕ ಆಶ್ಲೇಷಾ ಬಲಿ, ಪಂಚಾಮೃತ ಅಭಿಷೇಕ, ದೈವಗಳಿಗೆ ಕಲಶ ತಂಬಿಲ, ಸಾಮೂಹಿಕ ಸತ್ಯನಾರಾಯಣ ಪೂಜೆ, ಮಹಾ ಪೂಜೆ ಅನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಗಂಟೆ ೫ರಿಂದ ದೈವಗಳ ಭಂಡಾರ ತೆಗೆದು ಅರಸು ಮುಂಡ್ಯತ್ತಾಯ, ಗುಳಿಗ, ಪಂಜುರ್ಲಿ-ಕಲ್ಲುರ್ಟಿ, ಪೊಟ್ಟನ್ ದೈವ, ನಾಗರಕ್ತೇಶ್ವರಿ ನೇಮ ನಡೆದವು.

ಅರಸು ಮುಂಡ್ಯತ್ತಾಯ ದೈವಸ್ಥಾನದ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಕಲ್ಲಿಮಾರ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಸರೋಜಿನಿ ಅಭಿಕಾರ್, ಮಾಜಿ ಅಧ್ಯಕ್ಷರಾದ ತಾರಾನಾಥ ರೈ, ಕೋಶಾಧಿಕಾರಿ ಜಯಶಂಕರ ರೈ, ಸದಸ್ಯರಾದ ಕರುಣಾಕರ ಆಲೆಟ್ಟಿ, ಪಿ.ಎಸ್. ರಾಜಗೋಪಾಲ ಶಗ್ರಿತ್ತಾಯ, ಪದಾಧಿಕಾರಿಗಳಾದ ಉಮಾಶಂಕರ್ ನಾಯಕ್ ಪಾಂಗಳಾಯಿ, ಸೂರಪ್ಪ ಗೌಡ, ಕರುಣಾಕರ ಆಲೆಟ್ಟಿ, ಸಂಪತ್ ಕುಮಾರ್‌ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ