ಶಾಲಾ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹ

KannadaprabhaNewsNetwork |  
Published : Jun 27, 2024, 01:04 AM IST
ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥರಾಗಿರುವ ಘಟನೆಗೆ ಕಾರಣವಾದ ಏಜೆನ್ಸಿ ವಿರುದ್ಧ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿತು. | Kannada Prabha

ಸಾರಾಂಶ

ಶಾಲಾ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಿರುವ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಶಹಾಪುರ

ಶಾಲಾ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಿರುವ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ತಾಲೂಕಿನ ದೋರನಹಳ್ಳಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 200ಕ್ಕೂ ಹೆಚ್ಚು ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿಗಳು ಸೇವಿಸಿರುವ ಆಹಾರವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಮಕ್ಕಳ ಅಸ್ವಸ್ಥತೆಗೆ ಕಾರಣವಾದ ಆಹಾರ ಬದಲಿಗೆ ಬೇರೆ ಆಹಾರ ಪರೀಕ್ಷೆಗೆ ಒಳಪಡಿಸಿ, ಈ ಪ್ರಕರಣವನ್ನು ಮುಚ್ಚಿ ಹಾಕುವ ಅನುಮಾನವಿದೆ ಎಂದು ಅವರು ಆರೋಪಿಸಿದರು.

ನಗರದ ನಿರ್ಮಲಾದೇವಿ ಮಹಿಳಾ ಸಂಘದ ವತಿಯಿಂದ ತಾಲೂಕಿನ 13 ಶಾಲೆಗಳಿಗೆ ಬಿಸಿಯೂಟ ಪೂರೈಸಲಾಗುತ್ತಿದೆ. ಈ ಘಟನೆ ನಡೆಯಲು ಗುತ್ತಿಗೆದಾರರ ನಿರ್ಲಕ್ಷ್ಯ ಕಾರಣವೆಂದು ದೂರಿದರು.

ಬಡ ಮಕ್ಕಳ ಜೀವದ ಜೊತೆ ಆಟವಾಡಿದ ಏಜೆನ್ಸಿಯ ವಿರುದ್ಧ ಕ್ರಮ ಜರುಗಿಸದೆ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧಿಕಾರಿಗಳು ಸತ್ಯವನ್ನು ಮರೆಮಾಚುವ ಪ್ರಯತ್ನವೇನಾದರೂ ಮಾಡಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ್, ತಾಲೂಕು ಸಂಚಾಲಕ ಚಂದ್ರಕಾಂತ್ ಬಜೇರಿ, ಜಿಲ್ಲಾ ಸಂಚಾಲಕ ಮರಳು ಸಿದ್ದಪ್ಪ ನಾಯ್ಕಲ್, ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ್ ಅಣಬಿ, ಜಿಲ್ಲಾ ಖಜಾoಚಿ ಪರಶುರಾಮ ರೋಜಾ, ತಾಲೂಕು ಸಂಘಟನಾ ಸಂಚಾಲಕ ಮಾನಪ್ಪ ಮುದುಕನೊರ್, ಹೈಯ್ಯಾಳಪ್ಪ ದೇವರಕರ್, ಸುರೇಶ್ ಪೂಜಾರಿ, ನಾಗರಾಜ್ ಬೊಮ್ನಳ್ಳಿ ಶರಣಪ್ಪ ಸಾಧು ಇದ್ದರು.

PREV