ಕನ್ನಡಪ್ರಭ ವಾರ್ತೆ ಬೆಂಗಳೂರು
‘ಪಿಟಿಸಿಎಲ್ ಕಾಯ್ದೆ-1978ರ ಅನುಷ್ಠಾನದಲ್ಲಿನ ಸಮಸ್ಯೆಗಳು’ ಕುರಿತು ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಮಾತನಾಡಿ, ಸಂವಿಧಾನವು ನಮಗೆ ಜೀವಿಸುವ ಹಕ್ಕನ್ನು ನೀಡಿದೆ. ಈ ಹಕ್ಕನ್ನು ಅರ್ಥಪೂರ್ಣವಾಗಿ ಜಾರಿಗೊಳಿಸಲು ಆರ್ಥಿಕ ಸ್ವಾತಂತ್ರ್ಯ ಅತ್ಯಗತ್ಯವಾಗಿದೆ. ಇಂತಹ ಸ್ವಾತಂತ್ರ್ಯವನ್ನು ಭದ್ರಪಡಿಸಿಕೊಳ್ಳಲು ಭೂಮಿಯ ಲಭ್ಯತೆ ಮುಖ್ಯವಾಗಿದೆ. ಆದರೆ ಕಳಪೆ ಅನುಷ್ಠಾನದಿಂದಾಗಿ ಕಾಯ್ದೆಯ ಉದ್ದೇಶವೇ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಸಮಾಜದ ಕಟ್ಟಕಡೆಯ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಸರ್ಕಾರ ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು. ಪಿಟಿಸಿಎಲ್ ಕಾಯ್ದೆಯ ಬಗ್ಗೆ ವಿಧಾನ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕುಎಂದು ತಿಳಿಸಿದರು.ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಎಂ.ಜಾಮದಾರ್ ಮಾತನಾಡಿ, ಪಿಟಿಸಿಎಲ್ ಕಾಯ್ದೆ ನಮ್ಮ ಸುತ್ತಲಿರುವ ಸಾಮಾಜಿಕ ಅಸಮಾನತೆಗಳನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ಆದ್ದರಿಂದ ನ್ಯಾಯಕ್ಕಾಗಿ ಜಿಲ್ಲೆ ಜಿಲ್ಲೆಯಲ್ಲೂ ಹೋರಾಟ ನಡೆಸಬೇಕಿದೆ ಎಂದು ಕರೆ ನೀಡಿದರು.