ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಗ್ರಾಪಂ ಆವರಣದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಗ್ರಾಪಂ ಸದಸ್ಯರು, ಅಧಿಕಾರಿಗಳು ಮತ್ತು ಸಮುದಾಯದ ಮುಂಚೂಣಿ ಕಾರ್ಯಕರ್ತರೊಂದಿಗೆ ‘ಪಂಚಾಯಿತ್ ಸಮ್ಮೇಳನ, ಹವಾಮಾನ ಬದಲಾವಣೆ ಪರಿಣಾಮ ತಡೆಗಟ್ಟುವಲ್ಲಿ ಗ್ರಾಪಂ ಮತ್ತು ಸಮುದಾಯದ ಪಾತ್ರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹವಾಮಾನ ವೈಪರಿತ್ಯದಿಂದ ತೊಂದರೆಗೆ ಒಳಗಾಗುವ ಬಡವರು, ಕೂಲಿಕಾರ್ಮಿಕರು, ರೈತರು ಅದನ್ನು ತಡೆಗಟ್ಟುವ ಕ್ರಮಗಳನ್ನು ಅನುಸರಿಸಬೇಕಾಗಿದೆ. ಅದಕ್ಕಾಗಿ ಗ್ರಾಪಂ ಮಟ್ಟದಲ್ಲಿ ಸಭೆ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಹವಾಮಾನ ವೈಪರಿತ್ಯದ ಬಗ್ಗೆ ಸಂಶೋದಕರು, ವಿಜ್ಞಾನಿಗಳು ಮಾತ್ರ ಮಾತನಾಡುತ್ತಿದ್ದರು. ಇದೀಗ ಪ್ರತಿಯೊಬ್ಬರೂ ಮಾತನಾಡುವಂತಾಗಿದೆ. ಮೊದಲು ನಾವು ಸಣ್ಣ ಸಣ್ಣ ಬದಲಾವಣೆಗಳನ್ನು ಮಾಡಿಕೊಂಡು ವೈಪರಿತ್ಯ ತಡೆಗಟ್ಟುವ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.
ಮನ್ನುಲ್ ನಿರ್ದೇಶಕ ಸಿ.ಶಿವಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಎದುರಾಗುತ್ತಿರುವ ಹವಾಮಾನ ವೈಪರಿತ್ಯಕ್ಕೆ ಮನುಷ್ಯರ ದುರಾಸೆಯೇ ಕಾರಣ. ಗ್ರಾಮೀಣ ಪ್ರದೇಶಕ್ಕಿಂತ ಹೆಚ್ಚಾಗಿ ನಗರ ಪ್ರದೇಶದಲ್ಲಿ ಪರಿಸರ ಮತ್ತು ವಾಯು ಮಾಲಿನ್ಯ ಹೆಚ್ಚಾಗಿದೆ. ಸಾರ್ವಜನಿಕರಿಗೆ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಎಲ್ಲೆಂದರಲ್ಲಿ ಕಸ ಬಿಸಾಡುವುದನ್ನು ನಿಲ್ಲಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಲಿಂಗದೇವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಹವಾಮಾನ ಬದಲಾದಂತೆ ಮನುಷ್ಯರ ಜೀವನ ಶೈಲಿ, ಬೆಳೆಗಳ ರೂಪುರೇಷೆಗಳು, ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ, ಉಪಾಧ್ಯಕ್ಷ ನರಸಿಂಗಶೆಟ್ಟಿ, ವಿಎಸ್ಎಸ್ಎನ್ಬಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ, ಪಿಡಿಒ ಆರತಿಕುಮಾರಿ ಸೇರಿದಂತೆ ಗ್ರಾಪಂನ ಎಲ್ಲಾ ಸದಸ್ಯರು ಹಾಜರಿದ್ದರು.