ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

KannadaprabhaNewsNetwork |  
Published : Mar 03, 2025, 01:50 AM IST
ಕಳಪೆ ಕಾಮಗಾರಿಯಿಂದ ಕೂಡಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ರಸ್ತೆ : ಸಾರ್ವಜನಿಕರ ಆರೋಪ | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.

ಕನ್ನಡಪ್ರಭ ವಾರ್ತೆ ತಿಪಟೂರು

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.

ಬೈಪಾಸ್ ಕಾಮಗಾರಿ ಮುಗಿಯುವ ಹಂತದಲ್ಲಿದ್ದು ಕೆಲವೆ ತಿಂಗಳುಗಳಲ್ಲೇ ರಸ್ತೆಯಲ್ಲಿ ಕುಸಿತವಾಗಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಕಾಂಕ್ರಿಟ್, ಕಬ್ಬಿಣ, ಸಿಮೆಂಟ್ ಸೇರಿದಂತೆ ಕಾಮಗಾರಿಯೂ ಕಳಪೆ ಗುಣಮಟ್ಟದಿಂದ ಕೂಡಿದ್ದು ರಸ್ತೆ ಕುಸಿಯಲು ಕಾರಣವಾಗಿದೆ. ಹೆದ್ದಾರಿಯಲ್ಲಿ ಕುಸಿತವಾಗಿರುವ ಸ್ಥಳದ ಪಕ್ಕದಲ್ಲೆಯೇ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಇದ್ದು ಭಾರಿ ವಾಹನಗಳು ಸಂಚರಿಸುವಾಗ ಬ್ರಿಡ್ಜ್ ಕಂಪನವಾಗುತ್ತಿದೆ ಎಂದು ಸಾರ್ವಜನಿಕರ ಆರೋಪವಾಗಿದೆ. ಮೂರ್ನಾಲ್ಕು ಕಡೆ ರಸ್ತೆ ಕುಸಿತವಾಗಿರುವ ಕಾರಣ ಹೆದ್ದಾರಿ ಗುತ್ತಿಗೆದಾರರು ತಾತ್ಕಾಲಿಕ ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕೋಟ್ಯಂತರ ರು. ಹಣ ಖರ್ಚು ಮಾಡಿ ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಮುಂದಾಗಿದ್ದರೆ ಖರ್ಚು ಮಾಡುತ್ತಿರುವ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು ಸರ್ಕಾರ ಈ ಬಗ್ಗೆ ರಸ್ತೆ ಗುಣಮಟ್ಟ ಖಾತ್ರಿ ಪಡಿಸಿಕೊಳ್ಳದೆ ಇರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಲುಕಾರಣವಾಗಿದೆ. ಪ್ರತಿದಿನ ಈ ರಸ್ತೆಯಲ್ಲಿ ನೂರಾರು ಬಾರಿ ಹಾಗೂ ಲಘು ವಾಹನಗಳು ಓಡಾಡುವುದರಿಂದ ದೊಡ್ಡ ಅವಘಡಗಳು ಸಂಭವಿಸಿದರೆ ಹೆದ್ದಾರಿ ಇಲಾಖೆ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯವೇ ಜವಾಬ್ದಾರವಾಗಬೇಕಾಗಿದ್ದು ಸುಖಾಸುಮ್ಮನೆ ಅಮಾಯಕರ ಜೀವಗಳು ಬಲಿಯಾಗಬೇಕಾಗಿರುವುದರಿಂದ ಸರ್ಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸಂಪೂರ್ಣ ಕಾಮಗಾರಿ ಪರಿಶೀಲನೆ ಮಾಡಬೇಕು. ಕಳಪೆ ಕಾಮಗಾರಿಯಾಗಿದ್ದಲ್ಲಿ ಈಗಲೆ ಕಠಿಣ ಕ್ರಮ ಜರುಗಿಸಿ ಮರು ಕಾಮಗಾರಿ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ