ಕ್ರೈಸ್ತ ಸಮುದಾಯದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ದುಃಖ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಕ್ರೈಸ್ತ ಸಮುದಾಯದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ದುಃಖ ವ್ಯಕ್ತಪಡಿಸಿದ್ದಾರೆ.ಪೋಪ್ ಫ್ರಾನ್ಸಿಸ್ ಅವರ ನಿಧನದಿಂದಾಗಿ ಜಗತ್ತು ಶಾಂತಿ ದೂತರನ್ನು ಕಳೆದುಕೊಂಡಿದ್ದು, ಮಾನವ ಮೌಲ್ಯಗಳು, ಧಾರ್ಮಿಕ ಸಾಮರಸ್ಯ ಮತ್ತು ಪರಿಸರ ರಕ್ಷಣೆಯ ನಿಟ್ಟಿನಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಕೆಥೋಲಿಕ್ ಪವಿತ್ರ ಸಭೆಗೆ ಅರ್ಥಪೂರ್ಣವಾದ ನೇತೃತ್ವವನ್ನು ನೀಡಿದ್ದರು.ನಮ್ರತೆ ಮತ್ತು ಮುಕ್ತತೆ, ಕರುಣೆಯ ಬಡವರ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಕಾಳಜಿ, ಅಂತರ್-ಧರ್ಮೀಯ ಸಂವಾದದ ಮೇಲೆ ಒತ್ತು ನೀಡಿದ್ದರು ಮತ್ತು ಸಿದ್ಧಾಂತದಲ್ಲಿ ಅವರ ಸಂಪ್ರದಾಯವಾದದ ಹೊರತಾಗಿಯೂ ಉದಾರವಾದಿ ಪ್ರವೃತ್ತಿಯನ್ನು ಜಗತ್ತಿಗೆ ಸಾರಿದ್ದರು. ಧಾರ್ಮಿಕ ಸಾಮರಸ್ಯ ಮತ್ತು ಜಾಗತಿಕ ಶಾಂತಿಗೆ ಪೋಪ್ ಫ್ರಾನ್ಸಿಸ್ ಅವರ ಕೊಡುಗೆ ಅಪಾರವಾದುದು.ಅನಿಯಂತ್ರಿತ ಬಂಡವಾಳಶಾಹಿ, ಗ್ರಾಹಕೀಕರಣ ಮತ್ತು ಅನಿಯಂತ್ರಿತ ಅಭಿವೃದ್ಧಿಯನ್ನು ವಿರೋಧಿಸಿದ್ದ ಅವರು ಪ್ರೀತಿ ಮತ್ತು ದಾನಕ್ಕೆ ಹೆಚ್ಚಿನ ಗಮನ ನೀಡಿದ್ದರು. ಹವಾಮಾನ ಬದಲಾವಣೆಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಪೋಪ್ ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿಯನ್ನು ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದ್ದರು. ಅವರ ಜನಪರ ನಿಲುವು ಜಗತ್ತಿನ ಹಲವು ರಾಷ್ಟ್ರಗಳು ಕೊಂಡಾಡುತ್ತಿದ್ದು, ಅವರ ನಿಧನ ಜಗತ್ತಿಗೆ ದೊಡ್ಡ ನಷ್ಟ ಉಂಟು ಮಾಡಿದೆ. ನಿಧನರಾದ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.