ಧಾರವಾಡ:
ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜೆಎಸ್ಎಸ್ ಆವರಣದಲ್ಲಿರುವ ಉತ್ಸವ ಸಭಾಂಗಣದಲ್ಲಿ ವಿಶ್ವ ಜನಸಂಖ್ಯೆ ದಿನ ಉದ್ಘಾಟಿಸಿದ ಅವರು, ಅತಿ ಜನಸಂಖ್ಯೆಯಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ದುರ್ಬಳಕೆ, ಪರಿಸರ ಮಾಲಿನ್ಯ, ನಿರುದ್ಯೋಗ, ಬಡತನ ಮತ್ತು ಆಹಾರದ ಕೊರತೆ ಹೆಚ್ಚಾಗುತ್ತಿದೆ. ಜನಸಂಖ್ಯೆ ಹೆಚ್ಚಳಕ್ಕೆ ಬಡತನ, ಅನಕ್ಷರತೆ ಮತ್ತು ಅರಿವಿನ ಕೊರತೆಯೇ ಮುಖ್ಯ ಕಾರಣಗಳಾಗಿವೆ ಎಂದರು.
ನಾವು ಸುಸ್ಥಿರ ಭವಿಷ್ಯ ಹೊಂದಬೇಕಾದರೆ ಜನಸಂಖ್ಯೆ ನಿಯಂತ್ರಣ ಅತ್ಯಗತ್ಯವಾಗಿದೆ. ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ ಮತ್ತು ಸಣ್ಣ ಕುಟುಂಬದ ಮಹತ್ವವನ್ನು ಪ್ರತಿಯೊಬ್ಬರಿಗೂ ತಿಳಿಸಬೇಕಾಗಿದೆ. ಯುವ ಜನಾಂಗಕ್ಕೆ ಜನಸಂಖ್ಯೆ ಸ್ಫೋಟದ ಬಗ್ಗೆ ಜಾಗೃತಿ ಮೂಡಿಸಬೇಕು. ಸಣ್ಣ ಕುಟುಂಬ-ಸುಖೀ ಕುಟುಂಬ” ಎಂಬ ಪರಿಕಲ್ಪನೆ ಅಳವಡಿಸಿಕೊಳ್ಳಬೇಕು. ಸಂಪನ್ಮೂಲವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಜೀವನ ನೀಡಲು ಕೈಜೋಡಿಸಬೇಕೆಂದು ಹೇಳಿದರು.ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಮಹೇಶ ಚಿತ್ತರಗಿ ಮಾತನಾಡಿ, ಸಾರ್ವಜನಿಕರಿಗೆ ಉಚಿತವಾಗಿ ವಿವಿಧ ಸೇವೆ ಒದಗಿಸುತ್ತಿದೆ. ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ಯೋಜನಾ ವಿಧಾನ, ಗರ್ಭಿಣಿಯರ ಆರೈಕೆ, ಸುರಕ್ಷಿತ ಹೆರಿಗೆ, ಮಕ್ಕಳ ಲಸಿಕಾಕರಣ, ಹದಿಹರೆಯದವರ ಆರೋಗ್ಯ ಸೇವೆ ಹಾಗೂ ಸಂತಾನೋತ್ಪತ್ತಿ ಆರೋಗ್ಯ ಸೇವೆ, ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿವೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜನಸಂಖ್ಯಾ ಮಾಹಿತಿಯುಳ್ಳ ಪೋಸ್ಟರ್ ಬಿಡುಗಡೆ ಮಾಡಲಾಯಿತು.