ಕನ್ನಡಪ್ರಭ ವಾರ್ತೆ ಲೋಕಾಪುರ
ಸಮೀಪದ ವೆಂಕಟಾಪುರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ ರಾಷ್ಟ್ರೀಯ ಪೋಷಣಾ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗರ್ಭಿಣಿಯರ ಹಾಗೂ ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಮಾಡಿದ್ದರೂ ಅದರ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಲು ಪೋಷಣಾ ಅಭಿಯಾನ ಅನುಕೂಲವಾಗಿದೆ. ಹಾಗೆಯೇ ಇಂತಹ ಕಾರ್ಯಕ್ರಮ ಯಶಸ್ವಿಗೊಳಿಸಲು ಅಂಗನವಾಗಿ ಕಾರ್ಯಕರ್ತೆಯರ ಕಾರ್ಯವೈಖರಿ ಶ್ಲಾಘನೀಯ ಎಂದು ಮೆಚ್ಚಿಕೊಂಡರು.
ಪೋಷಣಾ ಅಭಿಯಾನ ತಾಲೂಕು ಸಂಯೋಜಕ ರಾಹುಲ್ ಗುಡೂರ ಮಾತನಾಡಿ, ಸತ್ಪ್ರಜೆಗಳನ್ನು ರೂಪಿಸಲು ಗರ್ಭಾವ್ಯವಸ್ಥೆಯಿಂದಲೇ ಮಹಿಳೆಯರಿಗೆ ಸತ್ವಯುತ ಆಹಾರ ನೀಡುವುದು, ಸ್ವಚ್ಛ ನೀರು ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಅರಿವು ಮೂಡಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.ಮುಖ್ಯ ಶಿಕ್ಷಕ ವಿಷ್ಣು ವರ್ಚಗಲ್ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಊಟಕ್ಕೆ ಹಸಿರು ಸೊಪ್ಪು ಮೊಳಕೆ ಕಾಳುಗಳು ಹಣ್ಣುಗಳು, ಹಳದಿ ಬಣ್ಣದ ಹಣ್ಣುಗಳು, ಹಾಲು, ಮೊಟ್ಟೆ ಸೇವನೆ ಮಾಡಬೇಕು. ಇದರಿಂದ ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಪಾಲಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ವಿವಿಧ ಬಗೆಯ ತಿಂಡಿ ತಿನಸುಗಳನ್ನು ತಯಾರಿಸಿದ್ದರು. ಅಭಿಯಾನದಲ್ಲಿ ಎಚ್.ಎಸ್.ದಾಸರ, ಪಪಂ ಅರೋಗ್ಯ ನಿರೀಕ್ಷಕ ಭಾಗ್ಯಶ್ರೀ ಪಾಟೀಲ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಬಿ.ಜೆ.ನಧಾಪ, ಎಂ.ಐ.ಕಂಬಾರ, ಶ್ರೇಯಾ ಹೊಸಕೊಟಿ, ಪರಶುರಾಮ ದಾನಿ, ಎಂ.ಎ.ಕುಳ್ಳೋಳ್ಳಿ, ಎಸ್.ಎಂ.ಕಬ್ಬೂರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಮತ್ತು ವೆಂಕಟಾಪುರ ಗ್ರಾಮಸ್ಥರು ಇದ್ದರು.