ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಅಂಚೆ ನೌಕರರು ತಯಾರಿ

KannadaprabhaNewsNetwork |  
Published : Oct 13, 2025, 02:00 AM IST
ಫೋಟೋ ಇದೆ  :- 12 ಕೆಜಿ ಎಲ್ಕು 1 : ಕುಣಿಗಲ್ ತಾಲೂಕು ಪಂಚಾಯಿತಿಯಲ್ಲಿ ನಡೆದ ಅಂಚೆ ಗ್ರಾಮೀಣ ನೌಕರರ ಮುಷ್ಕರದ ಪೂರ್ವಭಾವಿ ಸಭೆ | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಮಹದೇವಯ್ಯ ಅವರನ್ನು ಹುದ್ದೆಯಿಂದ ವಜಾ ಮಾಡಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಗ್ರಾಮೀಣ ಅಂಚೆ ನೌಕರರ ಸಂಘದ ವಲಯ ಕಾರ್ಯಾಧ್ಯಕ್ಷ ರಾಜ್ ಕುಮಾರ್ ತಿಳಿಸಿದ್ದಾರೆ

ಕನ್ನಡಪ್ರಭ ವಾರ್ತೆ ಕುಣಿಗಲ್ ಕೇಂದ್ರ ಸರ್ಕಾರ ಮಹದೇವಯ್ಯ ಅವರನ್ನು ಹುದ್ದೆಯಿಂದ ವಜಾ ಮಾಡಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಗ್ರಾಮೀಣ ಅಂಚೆ ನೌಕರರ ಸಂಘದ ವಲಯ ಕಾರ್ಯಾಧ್ಯಕ್ಷ ರಾಜ್ ಕುಮಾರ್ ತಿಳಿಸಿದ್ದಾರೆ ಕುಣಿಗಲ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಕೇಂದ್ರ ಸರ್ಕಾರ ಎಸ್ಎಸ್ ಮಹದೇವಯ್ಯ ಅವರನ್ನು ವಜಾ ಮಾಡಿರುವುದು ಖಂಡನೀಯ ವಿಚಾರ ಕಾರ್ಮಿಕರ ಮುಖಂಡರು ಕಾರ್ಮಿಕರ ಪರವಾಗಿ ಮಾತನಾಡುವ ಅನಿವಾರ್ಯತೆ ಇದೆ ಅದಕ್ಕಾಗಿ ಅವರನ್ನು ವಜಾ ಮಾಡುವುದು ಸರಿಯಲ್ಲ ಎಂದರು. ಅವರನ್ನು ಪುನಃ ಸರ್ಕಾರಿ ಹುದ್ದೆಗೆ ತೆಗೆದುಕೊಳ್ಳಬೇಕು ಎಂದು ಮರುತನಿಖೆಗೆ ಒತ್ತಾಯಿಸಿದರು .

ಅಕ್ಟೋಬರ್ 15 ರ ತನಕ ಕರ್ನಾಟಕ ತಮಿಳುನಾಡು ಆಂಧ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಕಪ್ಪು ಬಟ್ಟೆಯನ್ನು ಧರಿಸಿ ಅಂಚೆ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದು ನಂತರದ ದಿನಗಳಲ್ಲಿ ಐದು ಸಾವಿರಕ್ಕಿಂತ ಹೆಚ್ಚು ಅಂಚೆ ನೌಕರರು ಬೆಂಗಳೂರಿನಲ್ಲಿ ಜಮಾವಣೆಗೊಂಡು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದರು. ನೌಕರರ ಮುಖಂಡ ಎಸ್ ಎಸ್ ಮಂಜುನಾಥ್ ಮಾತನಾಡಿ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಅದನ್ನು ಕೇಳುವುದು ಕಾರ್ಮಿಕರ ಕರ್ತವ್ಯವಾಗಿದೆ ವಾಕ್ ಸ್ವಾತಂತ್ರವನ್ನು ಧಮನ ಮಾಡುವ ರೀತಿಯನ್ನು ಈ ಆಡಳಿತ ವ್ಯವಸ್ಥೆ ಮಾಡುತ್ತಿದೆ ಎಂದರು.

ಬೆಂಗಳೂರಿನ ಮೂಲದ ಎಸ್ ಎಸ್ ಮಹದೇವಯ್ಯ ಕೇಂದ್ರ ಕಚೇರಿಯಲ್ಲಿ ಹಾಗೂ ಅಂಚೆ ನೌಕರರ ಸಂಘಟನೆಯ ಎಐಜಿಡಿಎಸ್ ಯು ನ ಜನರಲ್ ಸೆಕ್ರೆಟರಿ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಅನ್ಯಾಯ ಆಗಿದೆ ಪ್ರತಿಯೊಬ್ಬ ಕನ್ನಡಿಗರು ಕೂಡ ಇದಕ್ಕೆ ಕೈ ಜೋಡಿಸಬೇಕು ಕಾರ್ಮಿಕರು ಅಂಚೆ ನೌಕರರು ಸಹಕಾರ ಬಹು ಮುಖ್ಯ ಎಂದರು. ಈ ಸಂದರ್ಭದಲ್ಲಿ ವಲಯ ರಾಜ್ಯಾಧ್ಯಕ್ಷರಾದ ಆರ್ ಭೈರಪ್ಪ. ಪೋಸ್ಟ್ ಮ್ಯಾನ್ ವಲಯ ಹಲವಾರು ಗ್ರಾಮೀಣ ಅಂಚೆ ನೌಕರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು