ಗುಂಡಿ ಬಿದ್ದ ರಸ್ತೆ: ಸಂಚಾರಕ್ಕೆ ಸಂಚಕಾರ

KannadaprabhaNewsNetwork |  
Published : Aug 22, 2025, 01:00 AM IST
21-ಎಸ್‌ಜಿಪಿ-2(1): ಸಿರುಗುಪ್ಪ ನಗರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟು ಹೋಗಿದ್ದ ರಸ್ತೆಯಲ್ಲಿ ಕೆಕೆಆರ್‌ಟಿಸಿ ಬಸ್‌ ತಗ್ಗಿನಲ್ಲಿ ಸಿಲುಕಿರುವುದು.21-ಎಸ್ಜಿಪಿ-2(3): ಹದಗೆಟ್ಟು ಹೋಗಿರುವ ರಸ್ತೆಯಲ್ಲಿ ಉರುಳಿದ ನೀರಿನ ಟ್ಯಾಂಕ್‌.21-ಎಸ್ಜಿಪಿ-2(4) : ನಗರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟು ಹೋಗಿದ್ದ ರಸ್ತೆಯಲ್ಲಿ ಗುಂಡಿಗಳು ಹೊಂಡಗಳಾಗಿ ನಿರ್ಮಾಣವಾಗಿವೆ. | Kannada Prabha

ಸಾರಾಂಶ

ನಗರದಲ್ಲಿನ ರಸ್ತೆಯು ಹಾಳಾಗಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ಉಂಟಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಗುಂಡಿಯಲ್ಲಿ ಸಿಲುಕಿದ ಬಸ್‌, ಭತ್ತ ತುಂಬಿದ ಟ್ರಾಕ್ಟರ್‌

ಕನ್ನಡಪ್ರಭ ವಾರ್ತೆ ಸಿರುಗುಪ್ಪ

ನಗರದಲ್ಲಿನ ರಸ್ತೆಯು ಹಾಳಾಗಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ಉಂಟಾಗಿದೆ. ಬೀದರ ಜಿಲ್ಲೆಯ ಜೇವರ್ಗಿಯಿಂದ ಚಾಮರಾಜನಗರಕ್ಕೆ ನಗರದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯು ಶೋಚನೀಯ ಸ್ಥಿತಿಯಲ್ಲಿದ್ದು, ಸಾರ್ವಜನಿಕರು, ವಾಹನ ಸವಾರರು ನಿತ್ಯ ನರಕ ಅನುಭವಿಸುವಂತಾಗಿದೆ.ನಗರದಲ್ಲಿನ ಹೆದ್ದಾರಿಯು ಸಂರ್ಪೂಣವಾಗಿ ಹಾಳಾಗಿದ್ದು, ಸಾಕಷ್ಟು ಗುಂಡಿಗಳು ಬಿದ್ದು, ವಾಹನ ಸವಾರರುಸರ್ಕಸ್‌ ಮಾಡುವಂತಾಗಿದೆ. ಮಳೆಗೆ ರಸ್ತೆಯಲ್ಲಿ ಗುಂಡಿಗಳು ಹೊಂಡಗಳಾಗಿ ನಿರ್ಮಾಣವಾಗಿವೆ.ಗುರುವಾರ ಕೆಕೆಆರ್‌ಟಿಸಿ ಬಸ್‌ನ ಚಕ್ರ ರಸ್ತೆಯ ಕೆಸರುಗುಂಡಿಯಲ್ಲಿ ಸಿಲುಕಿ ಚಾಲಕ, ನಿರ್ವಾಹಕ, ಪ್ರಯಾಣಿಕರು ಪರದಾಡಿದರು.ಭತ್ತ ತುಂಬಿದ ಟ್ರಾಕ್ಟರ್‌ ತಗ್ಗು ಗುಂಡಿಯಲ್ಲಿ ಸಿಲುಕಿದ್ದು ಕ್ರೇನ್‌ ಸಹಾಯದಿಂದ ತೆರವುಗೊಳಿಸಿದರು. ನೀರಿನ ಟ್ಯಾಂಕ್‌ ಮತ್ತು ಐಸ್‌ ಕ್ರಿಂ ವಾಹನ ರಸ್ತೆ ಮೇಲೆ ಉರುಳಿದ್ದು, ಟ್ರಾಫಿಕ್‌ ಕಿರಿಕಿರಿಯನ್ನು ಪ್ರಯಾಣಿಕರು ಅನುಭವಿಸಿದರು. ಸಾರ್ವಜನಿಕರ ಸಹಾಯದಿಂದ ತೆರವುಗೊಳಿಸಲಾಯಿತು. ನಾಗರಿಕರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕೆಲಸ ಮಾಡಬೇಕು ಹಾಗೂ ರಸ್ತೆ ಅಗಲಿಕರಣ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ಪ್ರಜ್ಞೆ ಮೂಡಿಸುತ್ತಿರುವ ಕನ್ನಡಪ್ರಭ
ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡಲು ಸಿದ್ಧ: ಶಾಸಕ ರವಿಕುಮಾರ್‌