ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಇಲ್ಲಿನ ಶ್ರೀದೇವಿ ತೋಟದ ಸಮೀಪದ ಕೆರೆಯ ಬಳಿ ರಾಜ್ಯ ಹೆದ್ದಾರಿ ಬದಿಯಲ್ಲಿ ಭಾರಿ ಹೊಂಡ ಹಾಗೂ ಬಿರುಕು ಮೂಡಿದ್ದು ಪೊಲೀಸ್ ಇಲಾಖೆ ವತಿಯಿಂದ ವಾಹನ ಚಾಲಕರ ಪ್ರಯಾಣಿಕರ ಸುರಕ್ಷತೆಯ ದಿಸೆಯಲ್ಲಿ ನಿಧನವಾಗಿ ಸಂಚರಿಸುವಂತೆ ಠಾಣಾಧಿಕಾರಿ ಚಂದ್ರಶೇಖರ್ ರಿಬ್ಬನ್ ಅಳವಡಿಸುವ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಸಿದ್ದಾಪುರ- ಚೆಟ್ಟಳ್ಳಿ- ಸುಂಟಿಕೊಪ್ಪ- ಸೋಮವಾರಪೇಟೆ ಈ ರಾಜ್ಯ ಹೆದ್ದಾರಿಯಲ್ಲಿ ನಿತ್ಯ ಬಸ್ಸು, ಲಾರಿ ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತವೆ. ಶ್ರೀದೇವಿ ಕೆರೆಯ ಸಮೀಪವೇ ಹೆದ್ದಾರಿ ಬದಿಯಲ್ಲಿ ಭಾರಿ ಗಾತ್ರದ ಹೊಂಡವಾಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇದನ್ನು ಮನಗಂಡ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿ ಕೆರೆಯ ಸಮೀಪ ಟೇಪ್ ಅಳವಡಿಸುವ ಈ ಪ್ರದೇಶವು ಅಪಾಯದಲ್ಲಿದೆ ವಾಹನ ಚಾಲಕರು ವಾಹನಗಳನ್ನು ಚಲಾಯಿಸುವಾಗ ನಿಧನವಾಗಿ ಸಂಚರಿಸಲು ಈ ಮೂನ್ಸೂಚನೆ ನೀಡಿದ್ದಾರೆ.
ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಕಾರ್ಯವೈಖರಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.. ಆರೋಗ್ಯ ತಪಾಸಣಾ ಶಿಬಿರ ಸಂಪನ್ನ:ಮಡಿಕೇರಿ: ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ ನೇತೃತ್ವದಲ್ಲಿ ಸೋಮವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ ಸಾಂಕ್ರಾಮಿಕ ಮತ್ತು ಆಸಾಂಕ್ರಾಮಿಕ ಕಾಯಿಲೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಪೌಷ್ಟಿಕ ಆಹಾರ ಸೇವನೆಯ ಮಹತ್ವ, ರಕ್ತ ಹೀನತೆ ಮತ್ತು ನಿವಾರಣೆ, ಗರ್ಭಿಣಿ, ಬಾಣಂತಿ ಆರೈಕೆ, ಲಸಿಕಾ ಕಾರ್ಯಕ್ರಮ, ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಶಿಬಿರದಲ್ಲಿ ಮಡಿಕೇರಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಗಾಳಿಬೀಡು ಆಯುಷ್ಮಾನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ಹಾಗೂ ಆಶಾ ಕಾರ್ಯಕರ್ತೆ ಕವಿತ ಹಾಜರಿದ್ದರು. ಆರೋಗ್ಯ ತಪಸಣಾ ಶಿಬಿರಕ್ಕೆ ಹಾಜರಾದ ಗ್ರಾಮಸ್ಥರಿಗೆ ಬಿಪಿ, ಮಧುಮೇಹ, ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು.ಶ್ರೀನಿಧಿ, ತ್ರಿವೇಣಿ ಹಾಗೂ ಮಾಧುರಪ್ಪ ಸ್ವಸಹಾಯ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಗಾಳಿಬೀಡು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಣಿ ಮುತ್ತಣ್ಣ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ವಂದಿಸಿದರು.