ಹಂಪಿಯಲ್ಲಿ ಉತ್ಖನನ ವೇಳೆ ಮಡಿಕೆ ಚೂರು ಪತ್ತೆ

KannadaprabhaNewsNetwork |  
Published : Jan 25, 2025, 01:01 AM IST
24ಎಚ್‌ಪಿಟಿ1- ಹಂಪಿಯ ಹಜಾರರಾಮ ದೇವಾಲಯದ ಬಳಿಯ ಪಾನ್‌ ಸುಫಾರಿ ಬಜಾರ್‌ನಲ್ಲಿ ಉತ್ಖನನದ ವೇಳೆ ದೊರೆತಿರುವ ಮಡಿಕೆ ಚೂರುಗಳು. | Kannada Prabha

ಸಾರಾಂಶ

ಉತ್ಖನನದ ವೇಳೆಯಲ್ಲಿ ವಿಜಯನಗರ ಕಾಲಕ್ಕೆ ಸೇರಿದ ಮಡಿಕೆ ಚೂರುಗಳು ಪತ್ತೆಯಾಗಿವೆ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ಪಾನ್‌ ಸುಪಾರಿ ಬಜಾರ್‌ನಲ್ಲಿ ಭಾರತೀಯ ಪುರಾತತ್ವ ಇಲಾಖೆ ಕೈಗೊಂಡಿರುವ ಉತ್ಖನನದ ವೇಳೆಯಲ್ಲಿ ವಿಜಯನಗರ ಕಾಲಕ್ಕೆ ಸೇರಿದ ಮಡಿಕೆ ಚೂರುಗಳು ಪತ್ತೆಯಾಗಿವೆ.

ವಿಜಯನಗರ ಸಾಮ್ರಾಜ್ಯದ ಗತ ವೈಭವ ಸಾರುವ ಹಂಪಿ ಉತ್ಸವ ನಡೆಸಲು ಜಿಲ್ಲಾಡಳಿತ ಹಾಗೂ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲೇ ಈಗ ಈ ಸಾಮ್ರಾಜ್ಯಕ್ಕೆ ಸೇರಿದ ಅವಶೇಷಗಳು ಪತ್ತೆಯಾಗುತ್ತಿವೆ. ಹಂಪಿ ನೆಲದ ಅಧ್ಯಯನಕ್ಕಾಗಿ ಪುರಾತತ್ವ ಇಲಾಖೆ ಉತ್ಖನನ ಕಾರ್ಯ ಕೈಗೊಂಡಿದ್ದು, ಆಗಿನ ಕಾಲಕ್ಕೆ ಸೇರಿದ ಮಡಿಕೆ ಚೂರುಗಳು ಪತ್ತೆಯಾಗಿವೆ. ಈ ಅವಶೇಷಗಳ ಬಗ್ಗೆ ಅಧ್ಯಯನ ನಡೆಸಲು ಪುರಾತತ್ವ ಇಲಾಖೆ ಮುಂದಾಗಿದೆ.

ಹಂಪಿಯಲ್ಲಿ ಕಳೆದ ಕೆಲ ವರ್ಷಗಳಿಂದ ಉತ್ಖನನ ನಡೆಸಲಾಗಿಲ್ಲ. ಈಗ ಮತ್ತೆ ಪುರಾತತ್ವ ಇಲಾಖೆ ಪಾನ್‌ ಸುಪಾರಿ ಬಜಾರ್‌ನಲ್ಲಿ ಉತ್ಖನನ ಕಾರ್ಯ ಕೈಗೆತ್ತಿಕೊಂಡಿದೆ. ಈ ವೇಳೆ ಮಡಿಕೆ ಚೂರುಗಳು ದೊರೆತಿವೆ.

ಹಂಪಿಯಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಈಗ ದೊರೆತಿರುವ ಮಡಿಕೆ ಚೂರುಗಳ ಬಗ್ಗೆ ಅಧ್ಯಯನ ನಡೆಸಲು ಪುರಾತತ್ವ ಇಲಾಖೆಗೆ ಸೂಚಿಸಲಾಗುವುದು. ತಜ್ಞರು ಹಾಗೂ ಇತಿಹಾಸಕಾರರು ಅಧ್ಯಯನ ನಡೆಸಲಿದ್ದಾರೆ. ವಿಜಯನಗರ ಸಾಮ್ರಾಜ್ಯದ ಇತಿಹಾಸವನ್ನು ಇನ್ನಷ್ಟು ಕಟ್ಟಿಕೊಡಲು ಉತ್ಖನನ ಕಾರ್ಯ ಸಹಕಾರಿ ಆಗಲಿದೆ ಎನ್ನುತ್ತಾರೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ