ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೋಳಿ ಸಾಕಾಣಿಕೆದಾರರ ಪ್ರತಿಭಟನೆ

KannadaprabhaNewsNetwork |  
Published : Aug 04, 2026, 02:00 AM IST
ರಾಣಿಬೆನ್ನೂರು ತಾಲೂಕಿನ ಕೃಷ್ಣಾಪುರ-ತೆರೆದಹಳ್ಳಿ ಗ್ರಾಮದಲ್ಲಿರುವ ಶ್ರೀ ವೆಂಕಟೇಶ್ವರ ಹ್ಯಾಚರೀಸ್ ಕಂಪನಿಯ ಮುಂಭಾಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೋಳಿ ಸಾಕಾಣಿಕೆದಾರರು ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಬೆಂಗಳೂರಿನ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಕೋಳಿ ಸಾಕಾಣಿಕೆದಾರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕಿನ ಕೃಷ್ಣಾಪುರ-ತೆರೆದಹಳ್ಳಿ ಗ್ರಾಮದಲ್ಲಿರುವ ಶ್ರೀ ವೆಂಕಟೇಶ್ವರ ಹ್ಯಾಚರೀಸ್ ಕಂಪನಿಯ ಮುಂಭಾಗದಲ್ಲಿ ಸೋಮವಾರ ಕೋಳಿ ಸಾಕಾಣಿಕೆದಾರರು ಮತ್ತು ರೈತರು ಧರಣಿ ಸತ್ಯಾಗ್ರಹ ನಡೆಸಿದರು.

ರಾಣಿಬೆನ್ನೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಕೋಳಿ ಸಾಕಾಣಿಕೆದಾರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕಿನ ಕೃಷ್ಣಾಪುರ-ತೆರೆದಹಳ್ಳಿ ಗ್ರಾಮದಲ್ಲಿರುವ ಶ್ರೀ ವೆಂಕಟೇಶ್ವರ ಹ್ಯಾಚರೀಸ್ ಕಂಪನಿಯ ಮುಂಭಾಗದಲ್ಲಿ ಸೋಮವಾರ ಕೋಳಿ ಸಾಕಾಣಿಕೆದಾರರು ಮತ್ತು ರೈತರು ಧರಣಿ ಸತ್ಯಾಗ್ರಹ ನಡೆಸಿದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಆನಂದರಾಜು ಮಾತನಾಡಿ, ಕೋಳಿ ಸಾಕಾಣಿಕೆ ಮಾಡಿ ಕೋಳಿಗಳನ್ನು ಬೆಳೆಸುತ್ತಿರುವ ರೈತರಿಗೆ ಸರಿಯಾಗಿ ಸೂಕ್ತ ಬೆಲೆ ಸಿಗುತ್ತಿಲ್ಲ. ಕೋಳಿಗಳನ್ನು ಸಾಕಲು ಸಾಲಸೋಲ ಮಾಡಿ ಬಂಡವಾಳ ಹಾಕಿ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಕೋಳಿಗಳು ಬೆಳೆದ ನಂತರ ವೆಂಕಟೇಶ್ವರ ಹ್ಯಾಚ್‌ರಿಸ್‌ನವರಿಗೆ ಮಾರಾಟ ಮಾಡುತ್ತಾರೆ. ಆದರೆ ಕಂಪನಿಯವರು ಸೂಕ್ತ ಬೆಲೆಗೆ ತೆಗೆದುಕೊಳ್ಳುತ್ತಿಲ್ಲ ಇದರಿಂದ ಕೋಳಿ ಸಾಕಾಣಿಕೆ ರೈತರು ಸಂಕಷ್ಟದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ಸರ್ಕಾರದ ಮಟ್ಟದಲ್ಲಿ ಪ್ರತಿ ಕೆಜಿಗೆ ರು.20 ನಿಗದಿ ಮಾಡಿ, ತಾತ್ಕಾಲಿಕವಾಗಿ ರು.10 ಗಳನ್ನು ಕೊಡಲು ನಿರ್ದೇಶಿಸಿದ್ದರೂ ಸಹ ಅದನ್ನು ಈ ಕಂಪನಿಯವರು ಪಾಲನೆ ಮಾಡುತ್ತಿಲ್ಲ. ಆದ್ದರಿಂದ ಈ ಪರಿಷ್ಕೃತ ದರ ರು.10.40 ಪೈಸೆ ನಿಗದಿ ಮಾಡಬೇಕು. ಗ್ರೋವಿಂಗ್ ದರ ಹೆಚ್ಚಿಸಬೇಕು, ವರ್ಷದಿಂದ ವರ್ಷಕ್ಕೆ ಪರಿಷ್ಕೃತ ದರವನ್ನು ಹೆಚ್ಚಿಸಬೇಕು ಈ ಬಗ್ಗೆ ಕಂಪನಿಯವರು ಮತ್ತು ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಅಲ್ಲಿಯವರೆಗೂ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.

ಕೋಳಿ ಸಾಕಾಣಿಕೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಓಲೇಕಾರ ಮಾತನಾಡಿ, ಹಲವಾರು ಬಾರಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಂಪನಿಯವರಿಗೆ ಹಾಗೂ ತಹಶೀಲ್ದಾರರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೌಖಿಕವಾಗಿ ಹಾಗೂ ಮನವಿ ಪತ್ರಗಳ ಮೂಲಕ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾವು ರಾಜ್ಯದ ವಿವಿಧ ಭಾಗಗಳಿಂದ ಕೋಳಿಸಾಕಾಣಿಕೆ ರೈತರು ಆಗಮಿಸಿ ಇಂದು ಧರಣಿ ಸತ್ಯಾಗ್ರಹವನ್ನು ಕೈಗೊಂಡಿದ್ದೇವೆ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದರೆ ಧರಣಿ ಸತ್ಯಾಗ್ರಹದಲ್ಲಿ ಏನಾದರೂ ಅನಾಹುತಗಳು ಸಂಭವಿಸಿದರೆ ಅದಕ್ಕೆ ಕಂಪನಿಯವರು ಮತ್ತು ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.

ಕೋಳಿ ಸಾಕಾಣಿಕೆದಾರರ ರಾಜ್ಯ ಉಪಾಧ್ಯಕ್ಷ ಶಂಕರಗೌಡ ಗಂಗನೌಡ ಈರನಗೌಡ್ರ, ಸುಭಾಸಗೌಡ್ರ, ನಾಗರಾಜ ಗೊರೋಜಿ, ಬಸನಗೌಡ ಗಂಗನಗೌಡ್ರ, ಮಂಜಪ್ಪ ಮಜ್ಜಗಿ, ಮಂಜಪ್ಪ ಗುಗ್ಗರಿ, ಸಿಪಿಯು ರಾಜ್ಯಾಧ್ಯಾಕ್ಷ ತ್ಯಾಗರಾಜ, ಕೆಪಿಎಸ್ ರಾಜ್ಯಾಧ್ಯಕ್ಷ ಗಂಗರಾಜ ಹಾಗೂ ಕೂಡ್ಲಗಿ, ಕೊಟ್ಟೂರು, ದಾವಣಗೆರೆ, ವಿಜಯನಗರ, ಹಾವೇರಿ, ಚಿತ್ರದುರ್ಗ ಜಿಲ್ಲೆಗಳ ಕೋಳಿಸಾಕಾಣಿಕೆದಾರ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಫ್‌ಪಿಒಗಳ ಅಭಿವೃದ್ಧಿಗೆ ಮೌಲ್ಯವರ್ಧನೆ, ಇ-ಮಾರ್ಕೆಟಿಂಗ್ ಅಗತ್ಯ: ಜಯಣ್ಣ
ಬೂತಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು