ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಹೌಸಿಂಗ್ ಬೋರ್ಡ್ ಕಾಲನಿ, ಶಾಂತಿನಗರ, ಮಹಾಕಾಳೇಶ್ವರಿ ಬಡಾವಣೆ, ಮಹಾತ್ಮಗಾಂಧಿ ನಗರದ ನಿವಾಸಿಗಳು ಬಳಸುವ ಮಲಿನ ನೀರು ಹಾಗೂ ಒಳಚರಂಡಿ ವ್ಯವಸ್ಥೆ ತ್ಯಾಜ್ಯ ನೀರು ನಾಲೆಗೆ ಒಡಲು ಸೇರದಂತೆ ಕ್ರಮವಹಿಸುವಂತೆ ಮನವಿ ಮಾಡಲಾಗಿದೆ. ಆದರೆ, ಈವರೆಗೂ ಯಾವುದೇ ಕ್ರಮ ಆಗಿಲ್ಲ. ಪ್ರತಿ ಬಾರಿ ಮನವಿ ಮಾಡಿದಾಗಲೂ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ಮಾತ್ರ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ಮಾತನಾಡಿ, ಪಟ್ಟಣದ ಮಧ್ಯೆ ಭಾಗದಲ್ಲಿ ವಿಶ್ವೇಶ್ವರಯ್ಯ ನಾಲಾ ಮೇಲ್ಭಾಗದ ಎಲ್ಲಾ ಬಡಾವಣೆಗಳ ಮಲೀನ ನೀರನ್ನು ನಾಲೆಗೆ ಬಿಡಲಾಗಿದೆ ಎಂದರು.
ಮಹಾತ್ಮಗಾಂಧಿ ನಗರ ಮತ್ತು ಹನುಮಂತನಗರದ ಬಳಿ ಹಂದಿ ಸಾಕಾಣಿಕೆ ಮಾಡಲಾಗುತ್ತಿದೆ. ಇದರ ತ್ಯಾಜ್ಯವೂ ನಾಲೆಗೆ ಸೇರುತ್ತಿದೆ. ಇದರಿಂದ ನಾಲಾ ಕೆಳಭಾಗದ ರೈತರು ಮತ್ತು ನಿವಾಸಿಗಳು ನೀರನ್ನು ಬಳಸದಂತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಾಲಾ ಕೆಳಭಾಗದಲ್ಲಿ ಹಲವಾರು ಗ್ರಾಮಗಳಿದ್ದು, ಗ್ರಾಮದವರು ಬಟ್ಟೆ ಹೊಗೆಯಲು, ಪಾತ್ರೆ ತೊಳೆಯಲು ಹಾಗೂ ಹಸು-ಕರುಗಳಿಗೆ ನೀರು ಕುಡಿಸಲು ನಾಲೆ ನೀರಿನ ಮೇಳೆ ಅವಲಂಭಿತರಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಬ್ದಾರಿತನದಿಂದ ನಾಲೆ ನೀರಿ ಮಲೀನವಾಗುತ್ತಿದೆ. ಕೆಳ ಭಾಗದ ಜನರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿದ್ದಾರೆ ಎಂದು ದೂರಿದರು.ಈ ಹಿಂದೆ ನಾಲೆ ನೀರು ಪರಿಶುದ್ಧವಾಗಿತ್ತು. ರೈತರು ಗದ್ದೆಯಲ್ಲಿ ಹರಿಯುವ ಜಿಗಳಿನ ನೀರನ್ನೇ ಕುಡಿದು ದಣಿವಾರಿಸಿ ಕೊಳ್ಳುತ್ತಿದ್ದರು. ಈಗ ಕುಡಿಯುವುದಿರಲಿ ನೀರನ್ನು ಮುಟ್ಟಲು ಹಲವು ಬಾರಿ ಯೋಚಿಸಬೇಕಿದೆ. ಒಳಚರಂಡಿ ಅವ್ಯವಸ್ಥೆಯಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಅಧಿಕಾರಿಗಳು ವಾದಿಸುತ್ತಾರೆ ಎಂದರು.
18ಕೆಎಂಎನ್ ಡಿ20
ಪಾಂಡವಪುರದಲ್ಲಿ ವಿಶ್ವೇಶ್ವರಯ್ಯ ನಾಲೆಗೆ ಒಳಚರಂಡಿ ತ್ಯಾಜ್ಯ ನೀರು ಸೇರದಂತೆ ಕ್ರಮ ವಹಿಸುವಂತೆ ಪುರಸಭೆ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು.