ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರ ಸಂಕಷ್ಟ ದೂರ: ವೀಣಾ ಕಾಶಪ್ಪನವರ

KannadaprabhaNewsNetwork |  
Published : Mar 11, 2024, 01:16 AM IST
ಬನಹಟ್ಟಿಯ ಈಶ್ವರಲಿಂಗ ಮೈದಾನದ ಸಾಂಸ್ಕೃತಿಕ ಭವನದಲ್ಲಿ ವಿವಿಕೆ ಫೌಂಡೇಶನ್ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನಾರಿಶಕ್ತಿ ಸಮಾವೇಶವನ್ನು ಕಾಂಗ್ರೆಸ್ ಧುರೀಣರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚಭಾಗ್ಯ ಯೋಜನೆಗಳಿಂದ ದುಡಿಯುವ ಶ್ರಮಿಕರು, ಬಡವರು, ಆರ್ಥಿಕ ಸಂಕಷ್ಟದಿಂದ ನರಳುತ್ತಿದ್ದ ಕೋಟ್ಯಂತರ ಕುಟುಂಬಗಳಿಗೆ ಗರಿಷ್ಠ ಸಹಾಯ ನೀಡಿದಂತಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು. ಬನಹಟ್ಟಿಯ ಶ್ರೀಈಶ್ವರಲಿಂಗ ಮೈದಾನದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚಭಾಗ್ಯ ಯೋಜನೆಗಳಿಂದ ದುಡಿಯುವ ಶ್ರಮಿಕರು, ಬಡವರು, ಆರ್ಥಿಕ ಸಂಕಷ್ಟದಿಂದ ನರಳುತ್ತಿದ್ದ ಕೋಟ್ಯಂತರ ಕುಟುಂಬಗಳಿಗೆ ಗರಿಷ್ಠ ಸಹಾಯ ನೀಡಿದಂತಾಗಿದೆ. ಬಡವರ ಬಡತನ ದೂರಾಗಿ ನೆಮ್ಮದಿಯ ಬದುಕು ರೂಪಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ, ಲೋಕಸಭಾ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿ ವೀಣಾ ಕಾಶಪ್ಪನವರ ಹೇಳಿದರು.

ಬನಹಟ್ಟಿಯ ಶ್ರೀಈಶ್ವರಲಿಂಗ ಮೈದಾನದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ನಾರಿಶಕ್ತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ದಾಪುಗಾಲಿಡುತ್ತಿದ್ದು, ಮಹಿಳಾ ಅಭ್ಯುದಯಕ್ಕೆ, ದೀನ-ದಲಿತ, ಅಲ್ಪಸಂಖ್ಯಾತ ಬಡ ಕುಟುಂಬಗಳ ಅಭ್ಯುದಯಕ್ಕೆ ರಾಜ್ಯ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ ಎಂದು ಹೇಳಿದರು.

ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಕ್ಷೇತ್ರದ ಜನತೆ ಆಶೀರ್ವದಿಸುವ ನಂಬಿಕೆ ಇದೆ. ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ಧಿ ಮಾಡುವಲ್ಲಿ ಹಾಲಿ ಸಂಸದರು ವಿಫಲರಾಗಿದ್ದು, ಅವರದೇ ಸರ್ಕಾರವಿದ್ದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಕ್ಷೇತ್ರದ ಪ್ರಗತಿಗೆ ಬದ್ಧಳಾಗಿರುವ ನನಗೆ ಈ ಬಾರಿ ಅವಕಾಶ ದೊರೆತಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ ಎಂದರು.

ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಿದರು.ಸಾಧನೆ ಮೆರೆದ ಮಹಿಳೆಯರು, ಸಾಧಕರಿಗೆ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಧುರೀಣರಾದ ಸಿದ್ದು ಕೊಣ್ಣೂರ, ಲಲಿತಾ ನಂದೆಪ್ಪನವರ, ರೇಣುಕಾ ಮಡ್ಡಿಮನಿ, ಆಯೇಷಾ ಫಣಿಬಂಧ, ಕವಿತಾ ಕೊಣ್ಣೂರ, ವಿದ್ಯಾ ಬಿಳ್ಳೂರ, ಲಕ್ಷ್ಮಣ ದೇಸಾರಟ್ಟಿ, ಮಲ್ಲಪ್ಪ ಸಿಂಗಾಡಿ, ರಾಜೇಂದ್ರ‍ ಭದ್ರನ್ನವರ, ಬಸವರಾಜ ದಲಾಲ ಉಪಸ್ಥಿತರಿದ್ದರು.

ಭರಮು ಉಳ್ಳಾಗಡ್ಡಿ, ಸಂಗೀತಾ ಖಾನಾಪುರ, ಹಾರೂನ್ ಬೇವೂರ, ಮುತ್ತು ಢವಳೇಶ್ವರ, ಓಂಪ್ರಕಾಶ ಮನಗೂಳಿ, ಶಂಕರ ಕೆಸರಗೊಪ್ಪ, ಕಿರಣ ಕರ್ಲಟ್ಟಿ, ಪಿಂಟೂ ಕುಂಬಾರ, ದಾನಪ್ಪ ಹುಲಜತ್ತಿ, ಬಸವರಾಜ ಶಿಂಧೆ, ನಾರಾಯಣ ನಿಕ್ಕಂ, ಮಹಾಲಿಂಗ ಮುಧೋಳ, ಚಂದ್ರು ಹರಿಜನ, ಗೀತಾ ಕಾವೇರಿ, ರಾಜು ಬಗನಾಳ, ನೀಲಕಂಠ ಮುತ್ತೂರ, ಚಂದ್ರು ಹರಿಜನ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೋದರಳಿಯ ಜತೆ ಪತ್ನಿ ಪರಾರಿ: ಮಕ್ಕಳ ಕೊಂದ ತಂದೆ ಆತ್ಮ*ತ್ಯೆ - ತಾನೇ ಸಾಕಿದ್ದ ಅಕ್ಕನ ಮಗನಿಂದ ಮಹಾಮೋಸ
ತೆಂಗಿನ ನಾರಿನ 6000 ಮ್ಯಾಟ್‌ ರಾಜ್ಯದಿಂದ ಜೈಪುರಕ್ಕೆ ರಪ್ತು