30ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

KannadaprabhaNewsNetwork |  
Published : Apr 26, 2024, 12:58 AM IST
ವಿದ್ಯುತ್‌ | Kannada Prabha

ಸಾರಾಂಶ

ಫೀಡರ್‌ನಲ್ಲಿ ಸುಧಾರಣಾ ಕಾಮಗಾರಿ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸರಬರಾಜು ನಿಲುಗಡೆಯಾಗಲಿದೆ.

ಕನ್ನಡಪ್ರಭ ವಾರ್ತೆ ಉಡುಪಿ

33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಶಿವಪುರ, ಚಾರ, ವಾಟರ್ ಸಪ್ಲೈ, ನಾಡ್ಪಲು ಫೀಡರ್ ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಮತ್ತು ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸರ್ಕಾರಿ ಆಸ್ಪತ್ರೆ, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನ, ಮುಳ್ಳುಗುಡ್ಡೆ, ಶಿವಪುರ, ಸೀತಾನದಿ, ಸೋಮೇಶ್ವರ, ನಾಡ್ಪಲು, ಕಾಸನಮಕ್ಕಿ, ಮಡಾಮಕ್ಕಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್ ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ಮಿಯ್ಯಾರ್, ಸಾಣೂರು, ಇರ್ವತ್ತೂರು, ನಿಟ್ಟೆ ವಾಟರ್ ಸಪ್ಲೈ ಫೀಡರ್ ನಲ್ಲಿ, 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಬೋಳ, ಬೆಳ್ಮಣ್, ನಂದಳಿಕೆ, ಮುಂಡ್ಕೂರು ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್ ಗಳಲ್ಲಿ ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯಿತಿ, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯಿತಿ, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್ , ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

33/11ಕೆವಿ ಕುಂಜಿಬೆಟ್ಟು ಉಪವಿದ್ಯುತ್ ಕೇಂದ್ರದಿಂದ ಹೊರಡುವ ಉಡುಪಿ-1 ಫೀಡರಿನಲ್ಲಿ ಹಾಗೂ 110/33/11 ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ನಿಟ್ಟೂರು ಮತ್ತು ಪುತ್ತೂರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 30ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ಬಡಗುಪೇಟೆ, ಸಿಟಿ ಬಸ್ ಸ್ಟ್ಯಾಂಡ್ ಏರಿಯಾ, ಕಡಿಯಾಳಿ, ಕಲ್ಸಂಕ, ಶಾರದಾ ಕಲ್ಯಾಣ ಮಂಟಪ, ಬಾಳಿಗ ಫಿಶ್ ನೆಟ್, ಆಭರಣ ಕಾರ್ ಶೋ ರೂಮ್, ನ್ಯೂ ಕಾಲನಿ ಕೊಡಂಕೂರು, ಕೊಡಂಕೂರು, ಹನುಮಂತನಗರ, ನಿಟ್ಟೂರು, ಅಡ್ಕದಕಟ್ಟೆ, ಅಡ್ಕದಕಟ್ಟೆ ಮಾರ್ಗ, ಪೆರಂಪಳ್ಳಿ, ನೋಳೆ ಲಚ್ಚಿಲ್, ಆದಿಶಕ್ತಿ ದೇವಸ್ಥಾನ, ಮೂಡುಸಗ್ರಿ, ಅಂಬಡೆಬೆಟ್ಟು, ಎಲ್.ವಿ.ಟಿ ಮಾಯಗುಂಡಿ, ನಯಂಪಳ್ಳಿ, ಅಂಬಾಗಿಲು, ದೊಡ್ಡಣಗುಡ್ಡೆ, ಪುತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿನಗರ ಮತ್ತು ಕೆ.ಎಂ.ಎಫ್ ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪ್ರಗತಿನಗರ, ಶಾಂತಿನಗರ, ರಾಜೀವನಗರ, 80 ಬಡಗುಬೆಟ್ಟು, ಈಶ್ವರನಗರ, ಸರಳೇಬೆಟ್ಟು, ಗಣೇಶ್ ಭಾಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

220/110/11ಕೆವಿ ಹೆಗ್ಗುಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಹೆಗ್ಗುಂಜೆ ಫೀಡರ್ ಮಾರ್ಗದಲ್ಲಿ ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 30ರಂದು ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಮಟಪಾಡಿ, ಕೊಳಲಗಿರಿ ಫೀಡರ್ ಮಾರ್ಗದಲ್ಲಿ ಹಾಗೂ 33/11ಕೆವಿ ಹೆಬ್ರಿ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಳ್ತೂರು ಫೀಡರ್ ಮಾರ್ಗದಲ್ಲಿ ಟ್ರೀ ಕಟ್ಟಿಂಗ್, ತುರ್ತು ನಿರ್ವಹಣೆ, ರಸ್ತೆ ಅಗಲೀಕರಣ ಪ್ರಯುಕ್ತ ಮರ ಕಡಿಯುವ ಹಾಗೂ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಟಪಾಡಿ, ಉಗ್ಗೇಲ್ ಬೆಟ್ಟು, ಜಾತಾಬೆಟ್ಟು, ಹಾವಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಹೊಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಏ. 30ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ವ್ಯತ್ಯಯವಾಗುತ್ತದೆ.

110/11ಕೆವಿ ಬೆಳಪು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಲ್ಲಾರು ಫೀಡರ್ ಮಾರ್ಗದಲ್ಲಿ ಹೊಸದಾಗಿ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ಮಲ್ಲಾರು, ಪಕೀರ್ಣಕಟ್ಟೆ, ಬೆಳಪು, ಮಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ