ಕನ್ನಡಪ್ರಭ ವಾರ್ತೆ ಹೊಸಪೇಟೆ
ಇಲ್ಲಿನ ಪುನೀತ್ ರಾಜಕುಮಾರ್ ವೃತ್ತದಲ್ಲಿರುವ ಅಪ್ಪು ಪುತ್ಥಳಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಬರೋಬ್ಬರಿ 25 ಕೆಜಿ ತೂಕದ ಕೇಕ್ ಕತ್ತರಿಸಿ ಅಪ್ಪುಗೆ ಜೈಕಾರ ಕೂಗಿದರು. ನಂತರ ಅಭಿಮಾನಿಗಳು ಅಪ್ಪುಗೆ ಇಷ್ಟವಾದ ಬಿರಿಯಾನಿ, ಅನ್ನದಾಸೋಹ ಮಾಡಿದರು.
ಡಿವೈಎಸ್ಪಿ ಡಾ. ತಳವಾರ ಮಂಜುನಾಥ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ನೆಚ್ಚಿನ ನಟನ ಜನ್ಮದಿನ ಆಚರಣೆ ಹಿನ್ನೆಲೆ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಬಂದಿದ್ದ ನೂರಾರು ಅಭಿಮಾನಿಗಳು ಚಿಕನ್, ಪಲಾವ್, ಬದನೆಕಾಯಿ ಪಲ್ಯ, ನುಗ್ಗೇಕಾಯಿ ಸಾಂಬಾರ್ ಸವಿದರು.ಅಪ್ಪು ಇಷ್ಟದ ಬಿರಿಯಾನಿ ಸವಿಯಲು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ಅಪ್ಪು ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿತ್ತು. ಅಭಿಮಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಅಪ್ಪು ಜನ್ಮದಿನದ ಹಿನ್ನೆಲೆ ಬೆಳಗ್ಗೆಯಿಂದಲೇ ಅಪ್ಪು ಪುತ್ಥಳಿ ಎದುರು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಸಂಜೆವರೆಗೆ ಪುತ್ಥಳಿ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.
ಇಲ್ಲಿನ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ತಂಗುದಾಣ ಉದ್ಘಾಟನಾ ಸಮಾರಂಭ ನಡೆಯಿತು. ಅಪ್ಪು ಯೂತ್ ಬ್ರಿಗೇಡ್ ವತಿಯಿಂದ ನಡೆದ ಕಾರ್ಯಕ್ರಮವನ್ನು