ಹಗರಿಬೊಮ್ಮನಹಳ್ಳಿ: ಪಟ್ಟಣದ ಆದರ್ಶ ಶಾಲೆಯ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ಸೌತ್ ಇಂಡಿಯಾ ನ್ಯಾಷನಲ್ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜ.೧೯ರಂದು ಹೈದ್ರಾಬಾದ್ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ವಿದ್ಯಾರ್ಥಿಗಳಾದ ಎಸ್.ಕೆ. ನಂದನ್, ರಾಹುಲ್ ಆಯ್ಕೆಯಾಗಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾಕರ ಮಾತನಾಡಿ, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಸ್ವತಃ ಪ್ರಾಯೋಗಿಕ ಜ್ಞಾನ ಬೆಳೆಸುವ ಅಗತ್ಯವಿದೆ. ಆದರ್ಶ ಶಾಲೆಯ ಮಕ್ಕಳಂತೆ ಪ್ರತಿಯೊಬ್ಬ ಶಿಕ್ಷಕರು ಮಕ್ಕಳಿಗೆ ವಿವಿಧ ತರಬೇತಿ ಹಾಗೂ ಗುಣಾತ್ಮಕ ಬೋಧನೆ ಮೂಲಕ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸ್ಪಂದಿಸಬೇಕು. ತಾಲೂಕಿನ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡುವಂತಿವೆ. ಈ ಸಾಲಿನ ಎಸ್ಎಸ್ಎಲ್ಸಿ ಮಕ್ಕಳ ಫಲಿತಾಂಶ ಸುಧಾರಿಸಲು ಶಿಕ್ಷಕರಿಗೆ ಮಾರ್ಗದರ್ಶನ ನೀಡಲಾಗಿದೆ ಎಂದರು.
ಹಗರಿಬೊಮ್ಮನಹಳ್ಳಿ ಪಟ್ಟಣದ ಆದರ್ಶ ಶಾಲೆಯ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ಸೌತ್ ಇಂಡಿಯಾ ನ್ಯಾಷನಲ್ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.