ಮನಸ್ಸು ಏಕಾಗ್ರತೆಗೊಳಿಸುವ ಸಾಧನ ಅಭ್ಯಾಸ

KannadaprabhaNewsNetwork |  
Published : Jan 05, 2024, 01:45 AM IST
2ಡಿಡಬ್ಲೂಡಿ7ಕರ್ನಾಟಕ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸುವುದು ಹೇಗೆ’ ಉಪನ್ಯಾಸದ ಉದ್ಘಾಟನೆ. | Kannada Prabha

ಸಾರಾಂಶ

ಶಿಕ್ಷಣಕಾಶಿ ಎಂದು ಕರೆಯಲ್ಪಡುವ ಧಾರವಾಡ ಜಿಲ್ಲೆಯು ಕಳೆದ ವರ್ಷ ಎಸ್ಸೆಸ್ಲೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿತ್ತು. ಈ ವರ್ಷ ಧಾರವಾಡ ಜಿಲ್ಲೆ ಉತ್ತೀರ್ಣತೆಯ ಪ್ರಮಾಣ ಹೆಚ್ಚಿಸಲು ಏನೆಲ್ಲಾ ಯೋಜನೆ

ಧಾರವಾಡ: ಮನಸ್ಸನ್ನು ಏಕಾಗ್ರತೆಗೊಳಿಸಲು ಅಭ್ಯಾಸವೇ ಪ್ರಧಾನ ಸಾಧನ. ಅಭ್ಯಾಸ ಎಂದರೆ ಪ್ರತಿದಿನ ಮಾಡುವ ಪ್ರಯತ್ನ ಎಂದು ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕಕುಮಾರ ಸಿಂಧಗಿ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪ, ಕರ್ನಾಟಕ ಪ್ರೌಢಶಾಲೆಯ ಸಹಯೋಗದಲ್ಲಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಅಧ್ಯಯನದಲ್ಲಿ ಏಕಾಗ್ರತೆ ಸಾಧಿಸುವುದು ಹೇಗೆ’ ಉಪನ್ಯಾಸದಲ್ಲಿ ಮಾತನಾಡಿದರು.

ಶಿಕ್ಷಣಕಾಶಿ ಎಂದು ಕರೆಯಲ್ಪಡುವ ಧಾರವಾಡ ಜಿಲ್ಲೆಯು ಕಳೆದ ವರ್ಷ ಎಸ್ಸೆಸ್ಲೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿತ್ತು. ಈ ವರ್ಷ ಧಾರವಾಡ ಜಿಲ್ಲೆ ಉತ್ತೀರ್ಣತೆಯ ಪ್ರಮಾಣ ಹೆಚ್ಚಿಸಲು ಏನೆಲ್ಲಾ ಯೋಜನೆ ರೂಪಿಸಿದೆ. ಕರ್ನಾಟಕ ವಿದ್ಯಾವರ್ಧಕ ಸಂಘ ಆಯೋಜಿಸಿರುವ ಈ ಕಾರ್ಯಕ್ರಮ ಮಕ್ಕಳಲ್ಲಿ ಗುಣಾತ್ಮಕ ಬದಲಾವಣೆ ತರುವುದರ ಜೊತೆ ಪರೀಕ್ಷೆ ಬಗ್ಗೆ ನೈತಿಕ ಸ್ಥೈರ್ಯ ತರುತ್ತಿದೆ. ಸಂಘದ ಈ ಪ್ರಯತ್ನ ಯಶಸ್ವಿಯಾಗಲಿ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ವಿದ್ಯಾರ್ಥಿಗಳು ಅಧ್ಯಯನ ಮಾಡುವಾಗ ವಿಷಯದ ಕಡೆ ಗಮನ ಕೊಡಬೇಕು. ಅವಧಾನಿಗಳಾಗಿ ಓದಬೇಕು. ಸಂಧಿಗ್ದ ಸಮಸ್ಯೆಗಳಿದ್ದರೆ ಪ್ರಶ್ನೆ ಕೇಳುವದರ ಮೂಲಕ ಪರಿಹಾರ ಪಡೆಯಬೇಕು. ಶ್ರದ್ಧೆ ಬದ್ಧತೆಯಿಂದ ಮಾತ್ರ ಏಕಾಗ್ರತೆ ಹೊಂದಲು ಸಾಧ್ಯ ಎಂದರು.

ಕರ್ನಾಟಕ ಪ್ರೌಢ ಶಾಲೆಯ ಆಡಳಿತಾಧಿಕಾರಿ ಜಿ.ಆರ್. ಭಟ್ ಮಾತನಾಡಿ, ಸ್ವಭಾವತಃ ಮನಸ್ಸು ಚಂಚಲವಾಗಿರುತ್ತದೆ. ಈ ಮನಸ್ಸನ್ನು ಕೇಂದ್ರಿಕರಿಸಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯ. ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ. ಜ್ಞಾನದಲ್ಲಿ ಶಕ್ತಿ ಇದೆ. ಜ್ಞಾನ ಸಂಪತ್ತು ಹೌದು. ಪಠ್ಯದ ಜೊತೆ ಬೇರೆ ಆಕರ ಓದಿ ಜ್ಞಾನ ಸಂಗ್ರಹ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆ.ಇ. ಬೋರ್ಡ್ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ ಮಾತನಾಡಿದರು. ಡಿಮ್ಹಾನ್ಸನ್ ಮನೋ ವೈದ್ಯಕೀಯ ಸಮಾಜ ಕಾರ್ಯಕರ್ತ ಪ್ರಶಾಂತ ಪಾಟೀಲ ಕ್ರಮಬದ್ಧ ಅಧ್ಯಯನ ಮಾಡಲು ಓದು, ಬರಹ ಹಾಗೂ ಏಕಾಗ್ರತೆ, ಸ್ಮರಣ ಶಕ್ತಿಗೆ ಸಂಬಂಧಪಟ್ಟಂತೆ ಉದಾಹರಣೆ ಸಹಿತ ಉಪನ್ಯಾಸ ನೀಡಿದರು. ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಪ್ರಮೀಳಾ ಜಕ್ಕಣ್ಣವರ, ಎಂ.ಎಸ್. ನರೇಗಲ್, ಕೆ.ಜಿ. ದೇವರಮನಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದರೆ ನನ್ನ ವಿರುದ್ಧವೂ ಕ್ರಮ ಆಗಲಿ: ಜಮೀರ್‌
ಈಗಾಗಲೇ ಸಾಕಷ್ಟು ಅನುಭವಿಸಿದ್ದೇವೆ, ಜಮೀರ್‌ರನ್ನು ಮತ್ತೆ ಸೇರ್ಸಿಕೊಳ್ಳಲ್ಲ: ಎಚ್ಡಿಕೆ