ಕನ್ನಡಪ್ರಭವಾರ್ತೆ ಚನ್ನಗಿರಿ
ಪಟ್ಟಣದ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ 2024- 2025ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ ಎನ್.ಎಸ್.ಎಸ್, ರೆಡ್ ಕ್ರಾಸ್ ರೋವರ್ಸ್ ಅಂಡ್ ರೇಂಜರ್ಸ್ ಚಟುವಟಿಕೆಗಳ ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ನಿಮ್ಮ ಕನಸುಗಳ ಸಾಕಾರಗೊಳಿಸುವ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಉನ್ನತ ಸ್ಥಾನ ಮಾನಗಳನ್ನು ಅಲಂಕರಿಸಿದಾಗ ಮಾತ್ರ ನೀವು ಓದಿದ ಕಾಲೇಜಿಗೂ, ನಿಮ್ಮ ತಂದೆ-ತಾಯಿಗಳಿಗೂ ಉತ್ತಮ ಹೆಸರು ಬರಲಿದೆ ಎಂದರು.ಅಧಿಕಾರದ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಉದ್ದೇಶ ಹೊಂದಿದ್ದೇನೆ. ಅದರಂತೆ ಕ್ಷೇತ್ರದ ಆಯ್ದ ಪ್ರೌಢಶಾಲೆಗಳಲ್ಲಿ ಕಳೆದ ವರ್ಷ ರಾತ್ರಿ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿದ್ದೆ. ಅದರಂತೆ ರಾತ್ರಿ ಶಾಲೆಗಳು ನಡೆದ ಎಲ್ಲ ಶಾಲೆಗಳಲ್ಲಿಯೂ ಉತ್ತಮ ಫಲಿತಾಂಶ ಬಂದಿದೆ. ಪ್ರಸ್ತುತ ವರ್ಷದಲ್ಲಿ ಕ್ಷೇತ್ರದ ಎಲ್ಲ ಶಾಲೆಗಳಲ್ಲಿಯೂ ರಾತ್ರಿ ಶಾಲೆಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಬಿ.ಜಿ. ಅಮೃತೇಶ್ವರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಿರುತೆರೆ ನಟಿ ಬಿಂದು ಹೊನ್ನಾಳಿ, ಸಹಾಯಕ ಪ್ರಾಧ್ಯಾಪಕರಾದ ಷಣ್ಮುಖಪ್ಪ, ಪ್ರದೀಪ್ ಕುಮಾರ್, ಪ್ರಸನ್ನ, ಸುರೇಶ್, ಸುಪ್ರಿಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿ.ವೈ. ರವಿಕುಮಾರ್, ಜೆ.ಎಸ್. ಜ್ಯೋತಿಪ್ರಸಾದ್, ಎಂ.ಆರ್. ಶಿವರಾಜ್, ಸಿ. ರಮೇಶ್, ಎಸ್.ಎಸ್. ಮಧುಕುಮಾರ್, ವಿದ್ಯಾರ್ಥಿಗಳು ಹಾಜರಿದ್ದರು.