ದೈನಂದಿನ ಬದುಕಿನಲ್ಲಿ ಕನಿಷ್ಠ 30 ನಿಮಿಷ ಯೋಗಾಭ್ಯಾಸ ಮಾಡಿ: ನ್ಯಾ.ಎಂ.ಎಸ್.ಹರಿಣಿ

KannadaprabhaNewsNetwork |  
Published : Jun 22, 2025, 01:18 AM IST
21ಕೆಎಂಎನ್ ಡಿ17 | Kannada Prabha

ಸಾರಾಂಶ

ಯೋಗ ನಮ್ಮ ಪುರಾತನ ಪರಂಪರೆಯಿಂದ ಬಂದ ಭಾಗವಾಗಿದ್ದು, ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಮಾನ ಪಡೆದುಕೊಂಡಿದೆ. ನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮ ಆಗುವುದರ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ಯೋಗ ದಿನಾಚರಣೆ ಆಚರಿಸಲಾಯಿತು.

ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಆರೋಗ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಪಾಲ್ಗೊಂಡು ಯೋಗ್ಯದ ವಿವಿಧ ಭಂಗಿಗಳ ಪ್ರದರ್ಶನ ಮಾಡಿದರು.

ಯೋಗಕ್ಕೆ ಚಾಲನೆ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್. ಹರಿಣಿ ಮಾತನಾಡಿ, ಮನುಷ್ಯನ ಉತ್ತಮ ಆರೋಗ್ಯ ಜೀವನಕ್ಕೆ ತಮ್ಮ ದೈನಂದಿನ ಬದುಕಿನಲ್ಲಿ ಕನಿಷ್ಠ 30 ನಿಮಿಷವಾದರೂ ಯೋಗಾಭ್ಯಾಸಕ್ಕೆ ಸಮಯ ಮೀಸಲಿಡಬೇಕು ಎಂದರು.

ಎರಡನೇ ಅಪರ ಸಿವಿಲ್ ನ್ಯಾಯಾಧೀಶ ರಾದ ಕೆ.ಗೋಪಾಲಕೃಷ್ಣ ಅವರು ಮಾತನಾಡಿ, ಯೋಗ ನಮ್ಮ ಪುರಾತನ ಪರಂಪರೆಯಿಂದ ಬಂದ ಭಾಗ ವಾಗಿದ್ದು, ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಮಾನ ಪಡೆದುಕೊಂಡಿದೆ. ನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮ ಆಗುವುದರ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಕಪನಿ ನಂಜೇಶ್ವರ, ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ , ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್ ಮತ್ತು ಪದಾಧಿಕಾರಿಗಳು ಹಾಗೂ ನ್ಯಾಯಾಲಯದ ಶಿರಸ್ತೇದಾರ್ ಗಳಾದ ಮಂಗಳಾದೇವಿ, ರಾಧಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ