ಯೋಗಕಲೆ ರೂಢಿಸಿಕೊಂಡರೆ ರೋಗಗಳಿಂದ ಮುಕ್ತಿ: ಡಾ.ಪ್ರಭಾ

KannadaprabhaNewsNetwork |  
Published : Jun 22, 2025, 01:18 AM IST
21ಕೆಡಿವಿಜಿ3-ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. .....................21ಕೆಡಿವಿಜಿ4-ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗ ಸಾಧಕರು, ಅಧಿಕಾರಿಗಳು, ಜನ ಪ್ರತಿನಿಧಿಗಳು. .........................21ಕೆಡಿವಿಜಿ5, 6-ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗ ಸಾಧಕರು, ವಿದ್ಯಾರ್ಥಿ, ಯುವ ಜನರು, ಸಾರ್ವಜನಿಕರು.  | Kannada Prabha

ಸಾರಾಂಶ

ಪ್ರಾಚೀನ ಕಾಲದಲ್ಲೇ ನಮ್ಮ ಪೂರ್ವಜರು ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಿಸುವ ಮಹತ್ತರವಾದ ಯೋಗಕಲೆಯನ್ನು ಜೀವನದಲ್ಲಿ ಅಳ‍ಡಿಸಿಕೊಂಡಿದ್ದಾರೆ. ನಿರಂತರ ಯೋಗಾಭ್ಯಾಸದಿಂದ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

- ಹೈಸ್ಕೂಲ್‌ ಮೈದಾನದಲ್ಲಿ 11ನೇ ವಿಶ್ವ ಯೋಗ ದಿನಾಚರಣೆ । ಅಧಿಕಾರಿಗಳು, ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸ- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಪ್ರಾಚೀನ ಕಾಲದಲ್ಲೇ ನಮ್ಮ ಪೂರ್ವಜರು ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಿಸುವ ಮಹತ್ತರವಾದ ಯೋಗಕಲೆಯನ್ನು ಜೀವನದಲ್ಲಿ ಅಳ‍ಡಿಸಿಕೊಂಡಿದ್ದಾರೆ. ನಿರಂತರ ಯೋಗಾಭ್ಯಾಸದಿಂದ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯೋಗವನ್ನು ರೂಢಿಸಿಕೊಳ್ಳುವ ಮೂಲಕ ಪ್ರತಿಯೊಬ್ಬರೂ ನಿರೋಗಿಗಳಾಗಬೇಕು ಎಂದರು.

ದೈಹಿಕ, ಸಾಮಾಜಿಕ, ಮತ್ತು ಪರಿಸರ ಕಾಳಜಿ ಇವೆಲ್ಲವನ್ನೂ ಒಳಗೊಂಡ ವಿಜ್ಞಾನವಿದ್ದರೇ ಅದು ಯೋಗಕಲೆ. ಮನಸ್ಸು ಮತ್ತು ದೇಹದ ಮೇಲೆ ನಿಯಂತ್ರಣ ಹೊಂದುವುದನ್ನೂ ಯೋಗವು ನಮಗೆ ಕಲಿಸುತ್ತದೆ. ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಯೋಗ ಮಾಡುವುದರಿಂದ ರೋಗದಿಂದ ಮುಕ್ತಿ ಹೊಂದಬಹುದು ಎಂದು ಹೇಳಿದರು.

ಯೋಗದಿಂದ ಶಿಸ್ತುಬದ್ಧ ಜೀವನ, ಏಕಾಗ್ರತೆ ಸಾಧ್ಯ. ಯೋಗವೆಂದರೆ ಕೇವಲ ದೇಹದ ಕಸರತ್ತು ಮಾತ್ರವಲ್ಲ, ಅದು ದೇಹ, ಮನಸ್ಸು ಹಾಗೂ ಆತ್ಮದ ಸಂಗಮವಾಗಿದೆ. ಭಾರತವು ಯೋಗದ ಜನ್ಮಭೂಮಿಯಾಗಿದೆ. ಪ್ರಾಚೀನ ಋಷಿಮುನಿಗಳು ಕೊಟ್ಟಂತಹ ಇಂತಹ ಅದ್ಭುತ ಯೋಗಕಲೆಯನ್ನು ಇಂದು ಜಗತ್ತೇ ಗುರುತಿಸಿ, ಸ್ವೀಕರಿಸಿ, ಅನುಸರಿಸುತ್ತಿದೆ. ಇದು ನಾವಲ್ಲಾ ಹೆಮ್ಮೆಪಡುವ ಸಂಗತಿ ಎಂದು ತಿಳಿಸಿದರು.

ಯೋಗ, ಪ್ರಾಣಾಯಾಮ, ಧ್ಯಾನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಆಧ್ಯಾತ್ಮಿಕ, ಶೈಕ್ಷಣಿಕ ಇನ್ನಿತರೆ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡಲು ಸಾಧ್ಯವಿದೆ. ಗ್ರಾಮೀಣ ಭಾಗದಲ್ಲೂ ತಿಂಗಳಿಗೊಂದು ಗ್ರಾಮದಂತೆ ಪ್ರತಿ ಗ್ರಾಮಗಳಲ್ಲಿಯೂ ಯೋಗ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು. ಮಾನಸಿಕ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಗ್ರಾಮೀಣಕ್ಕೂ ಯೋಗ ಮಹತ್ವ ಪರಿಚಯಿಸಬೇಕು ಎಂದು ಸಂಸದೆ ಡಾ.ಪ್ರಭಾ ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಯೋಗ ಪ್ರಾಣಾಯಾಮದಿಂದ ಆರೋಗ್ಯ ಸಮತೋಲನ ಕಾಪಾಡಬಹುದು. ಕನಿಷ್ಠ 15-20 ನಿಮಿಷ ಧ್ಯಾನ, ಯೋಗ ಮಾಡುವುದರಿಂದ ಸಾಕಷ್ಟು ಒತ್ತಡ ನಿವಾರಿಸುವುದರೊಂದಿಗೆ ಮಾನಸಿಕವಾಗಿ ಹಿಡಿತ ಸಾಧಿಸಬಹುದು. ಯೋಗ ಪ್ರಾಣಾಯಾಮ ಮತ್ತು ಧ್ಯಾನವನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಆರೋಗ್ಯವಾಗಿ ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನಾಗರಾಜ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮಹಾಂತೇಶ ಸೇರಿದಂತೆ, ಜೈಮುನಿ, ಪರಶುರಾಮ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಯೋಗ ಸಂಘ ಸಂಸ್ಥೆ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇದ್ದರು.

ಸಮಾರಂಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರಕುಮಾರ ಸ್ವಾಗತಿಸಿದರು. ಯೋಗ ಗುರುವೈದ್ಯಶ್ರೀ ಜ್ಯೋತಿ ಚನ್ನಬಸವಣ್ಣ ಯೋಗ ತರಬೇತಿ ನೀಡಿದರು.

- - -

(ಕೋಟ್‌) ಶಿಕ್ಷಣ, ಇನ್ನಿತರೆ ಒತ್ತಡಗಳಲ್ಲಿ ಸಿಲುಕಿಕೊಂಡರೂ ವೈಯಕ್ತಿಕವಾಗಿ ಯೋಗವನ್ನು ಜೀವನದಲ್ಲಿ ಅಳವಡಿಸಿಕೊಂಡ ಕಾರಣ ಇಂದು ಅಧಿಕಾರಿಯಾಗಿ ನಿಮ್ಮಗಳ ಮುಂದೆ ನಿಂತಿದ್ದೇನೆ. ಗ್ರಾಮ ಪಂಚಾಯಿತಿಗಳ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಬಳಸಿ, ಗ್ರಾಮೀಣ ಹಂತದಲ್ಲಿ ಕೂಡ ಯೋಗ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುವುದು.

- ಗಿಟ್ಟೆ ಮಾಧವ ರಾವ್‌, ಸಿಇಒ, ಜಿಪಂ

- - -

-21ಕೆಡಿವಿಜಿ3.ಜೆಪಿಜಿ: ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಬೆಳಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು. -21ಕೆಡಿವಿಜಿ4, 5, 6.ಜೆಪಿಜಿ: ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಯೋಗ ಸಾಧಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡು ಯೋಗಾಸನ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ