ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಪ್ರದೀಪ್ ಬಿ ಆರ್ ಅಧಿಕಾರ

KannadaprabhaNewsNetwork |  
Published : Jan 10, 2026, 03:00 AM IST
ಕುಶಾಲನಗರ ಟೌನ್ ಇನ್ಸ್ಪೆಕ್ಟರ್ ಪ್ರದೀಪ್ | Kannada Prabha

ಸಾರಾಂಶ

ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಪ್ರದೀಪ್ ಬಿ ಆರ್ ಅಧಿಕಾರ ವಹಿಸಿಕೊಂಡರು.

ಕುಶಾಲನಗರ: ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಪ್ರದೀಪ್ ಬಿ ಆರ್ ಅಧಿಕಾರ ವಹಿಸಿಕೊಂಡರು.

ಕಳೆದ ಒಂದು ವರ್ಷದಿಂದ ತೆರವುಗೊಂಡಿದ್ದ ಹುದ್ದೆಗೆ ಹೊಳೆನರಸೀಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಪ್ರದೀಪ್ ಅವರು ಈ ಹಿಂದೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರು.

--------------------------------------------

ಇಂದು ಪೊನ್ನಂಪೇಟೆಯಲ್ಲಿ ತರಬೇತಿ ಕಾರ್ಯಕ್ರಮ

ಮಡಿಕೇರಿ: ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಅವರ ಸೂಚನೆಯಂತೆ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸುವ ಸಂಬಂಧ ಕೊಡಗು ಜಿಲ್ಲೆಯ ಪೊನ್ನಂಪೇಟೆ ಉಪ ನೋಂದಣಿ ಕಚೇರಿಗೆ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ ಹಾಗೂ ಎಸ್‌ಎಚ್‌ಸಿಐಎಲ್ ಮೂಲಕ ಇ-ಸ್ಟಾಂಪ್ ಮಾರಾಟ ವ್ಯವಸ್ಥೆ ನಿರ್ವಹಿಸುತ್ತಿರುವ ಸಹಕಾರ ಸೌಹಾರ್ಧ ಸಂಸ್ಥೆಗಳ ಸಿಬ್ಬಂದಿಯವರಿಗೆ ತರಬೇತಿ ಕಾರ್ಯಕ್ರಮ ಜ. 10 ರಂದು ಮಧ್ಯಾಹ್ನ 1ರಿಂದ 2 ಗಂಟೆಯವರೆಗೆ ಪೊನ್ನಂಪೇಟೆ ಉಪ ನೋಂದಣಾಧಿಕಾರಿ ಅವರ ಕಚೇರಿಯ ಆವರಣದಲ್ಲಿ ನಡೆಯಲಿದೆ ಎಂದು ಪೊನ್ನಂಪೇಟೆ ಉಪ ನೋಂದಣಾಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ