ಪ್ರಧಾನ ಮಂತ್ರಿ ಮಾತೃ ವಂದನ ವಿಶೇಷ ನೊಂದಣಿ ಅಭಿಯಾನ

KannadaprabhaNewsNetwork |  
Published : Sep 10, 2024, 01:32 AM IST
ಚಿತ್ರ : 9ಎಂಡಿಕೆ4 : ಪ್ರಧಾನ ಮಂತ್ರಿಮಾತೃ ವಂದನ ವಿಶೇಷ ನೊಂದಣಿ ಅಭಿಯಾನ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಪ್ರಧಾನಮಂತ್ರಿ ಮಾತೃ ವಂದನಾ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಿತು. ಪೌಷ್ಠಿಕ ಆಹಾರದ ಬಗ್ಗೆ ಹಿರಿಯ ಆರೋಗ್ಯ ಸಹಾಯಕ ಕಾರ್ಯಕರ್ತೆ ರೇವತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಹೊಸಬಡಾವಣೆ ಅಂಗನವಾಡಿಯಲ್ಲಿ ಪ್ರಧಾನಮಂತ್ರಿ ಮಾತೃವಂದನ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ಹಾಗೂ ಪೋಷಣ ಅಭಿಯಾನ ಯೋಜನೆಯಡಿ ಪೂರಕ ಆಹಾರದ ಮಹತ್ವದ ಬಗ್ಗೆ ಕಾರ್ಯಕ್ರಮ ನೆರವೇರಿತು.

ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ ಮಾತೃವಂದನಾ ಯೋಜನೆ ಅಡಿ ಮೊದಲನೇ ಮಗುವಿಗೆ ಎರಡು ಕಂತುಗಳಲ್ಲಿ 5 ಸಾವಿರ ಹಣವನ್ನು ಹಾಗೂ ಎರಡನೇ ಹೆಣ್ಣು ಮಗುವಿಗೆ ಒಂದೇ ಕಂತಿ ನಲ್ಲಿ ಆರು ಸಾವಿರ ರು. ಪಡೆಯಬಹುದಾಗಿದೆ ಎಂದರು.

ತಾಯಿಯ ಆರೋಗ್ಯ ವರ್ಧನೆ ಹಾಗೂ ಪೂರಕ ಆಹಾರಕ್ಕಾಗಿ, ಆರೋಗ್ಯವಂತ ಮಗುವಿನ ಜನನಕ್ಕಾಗಿ ಸರ್ಕಾರದ ವತಿಯಿಂದ ನೀಡುವಂತಹ ಪ್ರೋತ್ಸಾಹ ಧನವಾಗಿರುತ್ತದೆ. ಈ ಮೊತ್ತವನ್ನು ನೇರ ನಗದು ವರ್ಗಾವಣೆಯ ಮೂಲಕ ಫಲಾನುಭವಿಯ ಆಧಾರ್ ನೋಂದಣಿಯಾದ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದು ಎಂದು ಸವಿತಾ ಅವರು ತಿಳಿಸಿದರು.

ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ನೌಕರಳಲ್ಲದ ಗರ್ಭಿಣಿಯು ಅಂಗನವಾಡಿ ಕಾರ್ಯಕರ್ತೆಯನ್ನು 180 ದಿನಗಳೊಳಗೆ ಸಂಪರ್ಕಿಸಲು ಹಾಗೂ ಎರಡನೇ ಹೆಣ್ಣು ಮಗುವಿನ ಸೌಲಭ್ಯ ಪಡೆಯಲು ಮಗು ಜನಿಸಿದ ಮೂರು ಅಂಗನವಾಡಿ ಕಾರ್ಯಕರ್ತೆಯನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಫೋನ್ ಮುಖಾಂತರ ಸ್ಥಳದಲ್ಲೇ ಅರ್ಜಿ ನೋಂದಣಿ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅರ್ಜಿಯೊಂದಿಗೆ ನೀಡಬೇಕಾದ ದಾಖಲಾತಿಗಳು ವಿವರಿಸಿದರು.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆಯ ಮಾಹಿತಿಯ ಪ್ರತಿ, ಫಲಾನುಭವಿಗಳ ಆಧಾರ್ ಕಾರ್ಡ್ ಪ್ರತಿ, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ನೋಂದಣಿ ಆಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಈಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಯಾವುದಾದರೂ ಒಂದು ಪ್ರತಿಯನ್ನು ಹೊಸ ಬಡಾವಣೆ ಅಂಗನವಾಡಿ ಕೇಂದ್ರಕ್ಕೆ ಸಂಬಂಧಿಸಿದ ಅರ್ಹ ಫಲಾನುಭವಿಗಳನ್ನು ನೋಂದಣಿ ಮಾಡಲಾಯಿತು.

ಅಂಗನವಾಡಿ ಮಕ್ಕಳು ಪ್ರಾರ್ಥಿಸಿದರು. ಅಂಗನವಾಡಿ ಕಾರ್ಯಕರ್ತೆ ಕಂಬೆಯಂಡ ಮುತ್ತಮ್ಮ ಅವರು ಸ್ವಾಗತಿಸಿದರು. ಪೌಷ್ಟಿಕ ಆಹಾರದ ಬಗ್ಗೆ ಹಿರಿಯ ಆರೋಗ್ಯ ಸಹಾಯಕ ಕಾರ್ಯಕರ್ತೆ ರೇವತಿ ತಿಳಿಸಿದರು. ಆಶಾ ಕಾರ್ಯಕರ್ತೆ ಜೂರಾ ಅವರು ವಂದಿಸಿದರು.

PREV

Recommended Stories

ಕಾಂಗ್ರೆಸ್ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ಸರ್ಕಾರಿ ಶಾಲೆ ಉನ್ನತಿಗೆ ಎಲ್ಲರ ಸಹಕಾರ ಅಗತ್ಯ