ಪರಪ್ಪನ ಅಗ್ರಹಾರ ಜೈಲಿಗೆ ಪ್ರದೋಷ್‌ ಸ್ಥಳಾಂತರ

KannadaprabhaNewsNetwork |  
Published : Oct 11, 2024, 11:53 PM IST
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಪ್ರದೋಶನನ್ನು ಹಿಂಡಲಗಾ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಯಿತು | Kannada Prabha

ಸಾರಾಂಶ

ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ, ನಟ ದರ್ಶನ್‌ ಆಪ್ತ ಪ್ರದೋಷ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.

ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ, ನಟ ದರ್ಶನ್‌ ಆಪ್ತ ಪ್ರದೋಷ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.

ಹೈಕೋರ್ಟ್ ಆದೇಶ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಪ್ರದೋಷ್‌ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ರವಾನಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರವಾಗಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಪೊಲೀಸರು ಶಿಫ್ಟ್ ಮಾಡಲಾಗಿತ್ತು. ಬೆಳಗಾವಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪ್ರದೋಷ್‌ ಪೊಲೀಸ್ ವಾಹನದಲ್ಲಿ ಕುಳಿತು ನಗೆ ಬೀರಿದ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!