ಪ್ರಗತಿ ಕ್ರಿಕೆಟರ್ಸ್‌ಗೆ 14 ರನ್‌ಗಳ ಜಯ

KannadaprabhaNewsNetwork |  
Published : May 09, 2024, 01:02 AM IST
ಚಿತ್ರ : 8ಎಂಡಿಕೆ2 : ಅಭಿಮನ್ಯು ದೇವಯ್ಯ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.  | Kannada Prabha

ಸಾರಾಂಶ

ಜನರಲ್‌ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡವ ಪ್ರೀಮಿಯರ್‌ ಲೀಗ್‌ ನಡೆಯುತ್ತಿದೆ. ಪ್ರಗತಿ ಕ್ರಿಕೆಟರ್ಸ್‌ ತಂಡ ಜಯ ದಾಖಲಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯ ಬುಧವಾರದ ಮೊದಲ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ತಂಡ ಟೀಮ್ ಲಿವರೇಜ್ ವಿರುದ್ಧ 14 ರನ್ ಗಳ ಜಯ ದಾಖಲಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 167 ರನ್ ಗಳನ್ನು ಸೇರಿಸಿತು.

ಇದನ್ನು ಬೆನ್ನಟ್ಟಿದ ಎದುರಾಳಿ ತಂಡ ಟೀಮ್ ಲಿವರೇಜ್ 18.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 153 ರನ್ ಗಳನ್ನಷ್ಟೇ ಗಳಿಸಿ ಸೋಲು ಒಪ್ಪಿಕೊಂಡಿತು.

ಪ್ರಗತಿ ಕ್ರಿಕೆಟರ್ಸ್ ನ ಅಭಿಮನ್ಯು ದೇವಯ್ಯ ಅವರು 36 ಬಾಲ್ ಗಳಲ್ಲಿ ಭರ್ಜರಿ 73 ರನ್ ಗಳನ್ನು ಗಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಮಳೆಯಿಂದ ಪಂದ್ಯಾಟ ರದ್ದು ಬುಧವಾರದ ಎರಡನೇ ಪಂದ್ಯ ಮಳೆಯ ಕಾರಣದಿಂದ ರದ್ದುಗೊಂಡಿತು.

ಮಧ್ಯಾಹ್ನ ಆಯೋಜಿಸಲಾಗಿದ್ದ ಪಂದ್ಯಾಟದಲ್ಲಿ ಟಾಸ್ ಗೆದ್ದ ರಾಯಲ್ ಟೈಗರ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಣ್ಣಿಗೇರಿ ನಾಡ್ ತಂಡ 15.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 147 ರನ್ ಗಳನ್ನು ಗಳಿಸಿತ್ತು. ಆದರೆ ಮಳೆ ಬಂದ ಕಾರಣ ಆಯೋಜಕರು ಪಂದ್ಯವನ್ನು ರದ್ದುಗೊಳಿಸಿದರು.

ಇಂದಿನ ಪಂದ್ಯ : ಮೇ 9 ಪಂದ್ಯ-1(ಬೆಳಿಗ್ಗೆ 8:30) : ಟೀಮ್ ಲಿವರೇಜ್ / ಕೂರ್ಗ್ ಯುನೈಟೆಡ್

ಪಂದ್ಯ -2 (ಮಧ್ಯಾಹ್ನ 1:30): ಕೊಡವ ಟ್ರೈಬ್‌ / ಟೀಮ್ ವೈಲ್ಡ್ ಫ್ಲವರ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ